ಮಂಡ್ಯ ಜಿಲ್ಲೆಯಲ್ಲಿ ರಾಜಕೀಯ ಧೃವೀಕರಣ ಆರಂಭವಾಗಿದೆ ಎಂಬುದರ ದ್ಯೋತಕವಾಗಿ ಕಾಂಗ್ರೆಸ್ ಹಿರಿಯ ನಾಯಕರನ್ನು ಸೆಳೆದುಕೊಳ್ಳುವ ಪ್ರಯತ್ನದಲ್ಲಿ ಜೆಡಿಎಸ್ ಫಲಪ್ರದವಾಗುವ ಹಂತಕ್ಕೆ ಬಂದಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮಂಡ್ಯದಿಂದಲೇ ಪಕ್ಷ ಸಂಘಟನೆಯ ಬೇರುಗಳನ್ನು ಬಲಪಡಿಸಲು ತಂತ್ರಗಾರಿಕೆ ಆರಂಭಿಸಿದ್ದಾರೆಂದು ಹೇಳಲಾಗಿದೆ
ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಅನೇಕ ನಾಯಕರುಗಳನ್ನು ಸೆಳೆದುಕೊಳ್ಳುವ ಪ್ರಯತ್ನ ಸಾಗಿದೆ ಎಂಬ ಇಬ್ರಾಹಿಂ ಹೇಳಿಕೆಯ ಬೆನ್ನಲ್ಲೇ ಮಾಜಿ ಸಚಿವ, ಮಂಡ್ಯ ರಾಜಕಾರಣದ ಪ್ರಭಾವಿ ಕುಟುಂಬ ನಾಯಕ ಎಂ ಎಸ್ ಆತ್ಮಾನಂದ ಅವರನ್ನು ಸೆಳೆದುಕೊಳ್ಳಲು ಇಬ್ರಾಹಿಂ ಗಾಳ ಹಾಕಿದ್ದಾರೆ.
ಇಬ್ರಾಹಿಂ ಹಾಗೂ ಆತ್ಮನಂದ ಅವರು ಸಮಕಾಲಿನರಾಗಿಯೇ ರಾಜಕಾರಣ ಆರಂಭಿಸಿ ಶಾಸಕರಾಗಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಹಳೆ ಗೆಳತನ ವಿಶ್ವಾಸ ಹಾಗೂ ಕಾಂಗ್ರೆಸ್ ನಲ್ಲಿ ಆತ್ಮಾನಂದ ಅವರನ್ನು ನಿರ್ಲಕ್ಷ್ಯ ಮಾಡುತ್ತಿರುವ ಅಂಶಗಳನ್ನು ಗಮನಿಸಿದ ಇಬ್ರಾಹಿಂ , ಆತ್ಮಾನಂದ ಅವರನ್ನು ಜೆಡಿಎಸ್ ಸೇರಿಸಿಕೊಂಡು ಪಕ್ಷ ಸಂಘಟನೆ ಜವಾಬ್ದಾರಿ ನೀಡಲು ಬಯಸಿದ್ದಾರೆ ಎಂದು ಗೊತ್ತಾಗಿದೆ
ಮಂಡ್ಯ ಕಾಂಗ್ರೆಸ್ ಹಾಗೂ ಬಿಜೆಪಿ ಇನ್ನೂ ಕೆಲವು ಮುಖಂಡರು ಜೆಡಿಎಸ್ ಗೆ ಸೇರ್ಪಡೆಯಗುವ ಸಾಧ್ಯತೆಗಳಿವೆ
ಜೆಡಿಎಸ್ ಸೇರ್ಪಡೆ ಕುರಿತಂತೆ ನ್ಯೂಸ್ ಸ್ನ್ಯಾಪ್ ಡಿಜಿಟಲ್ ಮಿಡಿಯಾಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಆತ್ಮಾನಂದ, ನಾನು , ಇಬ್ರಾಹಿಂ ಸ್ನೇಹಿತರು. ನನ್ನನ್ನು ಸಂಪರ್ಕ ಮಾಡಿದ್ದರು ನಿಜ. ಆದರೆ ಸದ್ಯಕ್ಕೆ ಯಾವುದೇ ಆಲೋಚನೆ ಮಾಡಿಲ್ಲ ಮತ್ತು ಇವೆಲ್ಲವೂ ಏಕಾಏಕಿ ನಿರ್ಧಾರ ಕೈಗೊಳ್ಳುವ ವಿಷಯವೂ ಅಲ್ಲ. ಕಾದು ನೋಡಿ ಎಂದಷ್ಟೇ ಹೇಳಿದರು.
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
This website uses cookies.
Leave a Comment