Karnataka

‘SSLC’ ‘PUC’ ವಿದ್ಯಾರ್ಥಿಗಳಿಗೆ ವರ್ಷಕ್ಕೆ 3 ಬಾರಿ ಪರೀಕ್ಷೆ :  ಶಿಕ್ಷಣ ಇಲಾಖೆ ನಿರ್ಧಾರ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ವ್ಯವಸ್ಥೆಯಲ್ಲಿ ಹೊಸ ವಿಧಾನ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಒಂದು ವರ್ಷದಲ್ಲಿ ಮೂರು ವಾರ್ಷಿಕ ಪರೀಕ್ಷೆ ನಡೆಸಲು ಇಲಾಖೆ ನಿರ್ಧರಿಸಿದೆ.

ದ್ವೀತಿಯ PUC ಮತ್ತು SSLC ಪರೀಕ್ಷೆಗಳನ್ನ ವರ್ಷದಲ್ಲಿ 3 ಬಾರಿ ಮಾಡಲು ನಿರ್ಧರಿಸಲಾಗಿದೆ. ಪರೀಕ್ಷೆ 1, ಪರೀಕ್ಷೆ 2, ಪರೀಕ್ಷೆ 3 ಹೆಸರಿನಲ್ಲಿ ಪರೀಕ್ಷೆ ನಡೆಸಲಾಗುವುದು.

ವಾರ್ಷಿಕ ಪರೀಕ್ಷೆ, ಪೂರಕ ಪರೀಕ್ಷೆ ವ್ಯವಸ್ಥೆ ಕೈಬಿಡಲಾಗುವುದು. ಈ ವರ್ಷದಿಂದ ಹೊಸ ವ್ಯವಸ್ಥೆ ಜಾರಿಯಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ಹೊಸ ವ್ಯವಸ್ಥೆಯ ಪರೀಕ್ಷೆ ವಿಧಾನ

* ವಿದ್ಯಾರ್ಥಿಗಳು ಒಂದು ಪರೀಕ್ಷೆಯಲ್ಲಿ ಕಡಿಮೆ ಅಂಕ‌ ಪಡೆದರೆ ಇನ್ನೊಂದು ಪರೀಕ್ಷೆ ಬರೆಯಬಹುದು. ಅದರಲ್ಲಿ ಕಡಿಮೆ ಬಂದರೆ 3 ನೇ ಪರೀಕ್ಷೆ ಬರೆಯಬಹುದು.
* 2 ಮತ್ತು 3 ನೇ ಪರೀಕ್ಷೆಯಲ್ಲಿ ಮೊದಲ ಪರೀಕ್ಷೆಗಿಂತ ಕಡಿಮೆ ಅಂಕ ಬಂದಿದ್ದರೆ, ಎರಡು ಪರೀಕ್ಷೆ ಬರೆದರೂ ಮೊದಲ ಪರೀಕ್ಷೆಯ ಅಂಕಗಳನ್ನೆ ಉಳಿಸಿಕೊಳ್ಳಬಹುದು.
* ಯಾವುದಾದರೂ ಒಂದು ವಿಷಯದಲ್ಲಿ ಕಡಿಮೆ ಅಂಕ ಬಂದಿದೆ ಅಂತ ಅನ್ನಿಸಿದರೆ ಅ ವಿದ್ಯಾರ್ಥಿಯೂ 2 ಮತ್ತು ಮೂರನೇ ಪರೀಕ್ಷೆಯಲ್ಲಿ ಆ ಒಂದು ವಿಷಯವನ್ನು ಪ್ರತ್ಯೇಕವಾಗಿ ಬರೆದು ಹೆಚ್ಚು ಅಂಕ ಪಡೆದುಕೊಳ್ಳಬಹುದು.
* ಮೊದಲ ಪರೀಕ್ಷೆಯಲ್ಲಿ ಫೇಲ್ ಆದರೂ ಅ ವಿದ್ಯಾರ್ಥಿಯನ್ನ ಫೇಲ್ ಅಂತ ಕರೆಯುವುದಿಲ್ಲ. ಆತ 2, 3 ನೇ ಪರೀಕ್ಷೆ ಬರೆದು ಪಾಸ್ ಆಗಬಹುದು.
* ವಿದ್ಯಾರ್ಥಿ 1, 2, 3 ಪರೀಕ್ಷೆಗಳಲ್ಲಿ ಯಾವ ಪರೀಕ್ಷೆಯಲ್ಲಿ ಪಾಸ್ ಆಗಿರುತ್ತಾನೋ ಅ ಪರೀಕ್ಷೆಯಲ್ಲಿ ಪಾಸ್ ಅಂತ ಅಂಕಪಟ್ಟಿ ನೀಡಲಾಗುತ್ತದೆ.
* 2023-24ನೇ ಸಾಲಿನಿಂದ ಹೊಸ ವ್ಯವಸ್ಥೆ ಜಾರಿಯಾಗಲಿದೆ. 

ಎಸ್‌ಎಸ್‌ಎಲ್‌ಸಿ (SSLC ) ಪರೀಕ್ಷೆಗಳು :

ಪರೀಕ್ಷೆ 1
ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ
ಫಲಿತಾಂಶ ಮೇ 8

ಪರೀಕ್ಷೆ 2
ಜೂನ್ 12 ರಿಂದ ಜೂನ್ 19
ಜೂನ್ 29 ಫಲಿತಾಂಶ

ಪರೀಕ್ಷೆ 3
ಜುಲೈ 29 ರಿಂದ ಆಗಸ್ಟ್ 5
ಆಗಸ್ಟ್ 19 ಫಲಿತಾಂಶ

ದ್ವೀತಿಯ ಪಿಯುಸಿ ( PUC ) ವೇಳಾಪಟ್ಟಿ :

ಪರೀಕ್ಷೆ 1
ಮಾರ್ಚ್ 1 ರಿಂದ ಮಾರ್ಚ್ 25
ಫಲಿತಾಂಶ ಏಪ್ರಿಲ್ 22

ಪರೀಕ್ಷೆ 2
ಮೇ 15 ರಿಂದ ಜೂನ್ 5
ಜೂನ್ 21 ಫಲಿತಾಂಶ

ಪರೀಕ್ಷೆ 3
ಜುಲೈ 12 ರಿಂದ ಜುಲೈ 30
ಆಗಸ್ಟ್ 16 ಫಲಿತಾಂಶ

Team Newsnap
Leave a Comment
Share
Published by
Team Newsnap

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024