ವ್ಯಾಕ್ಸಿನ್, ಆತ್ಮ ನಿರ್ಭರ ಭಾರತ, ಕೃಷಿ, ಆಮದು ಸುಂಕ – ತೆರಿಗೆ ಹಾಗೂ ಖಾಸಗಿಕರಣ – ಇವು ಬಜೆಟ್ ನ ಪಂಚ್ ಪ್ಲಾನ್ ಗಳು.
ವಿಶ್ವದ ಅರ್ಥ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಕೊರೊನಾ ಮಹಾಮಾರಿ, ಹಲವು ಸಮಸ್ಯೆಗಳ ಸರಮಾಲೆಯನ್ನೇ ಸೃಷ್ಟಿಸಿದ ನಂತರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಂಡಿಸುತ್ತಿರುವ ಕೇಂದ್ರ ಬಜೆಟ್ ಮೇಲೆ ಇಡೀ ದೇಶದ ಜನರು ಅಪಾರ ನಿರೀಕ್ಷೆ ಇಟ್ಟು ಕೊಂಡಿದ್ದಾರೆ.
ದೇಶದ ಆರ್ಥಿಕತೆಯನ್ನು ಮೇಲೆತ್ತಲು, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಉದ್ಯೋಗಗಳ ಸೃಷ್ಟಿಗೆ ಯೋಜನೆಗಳನ್ನು ರೂಪಿಸುವ ನಿರೀಕ್ಷೆ ಇದೆ.
ಬಜೆಟ್ ನಿರೀಕ್ಷೆಗಳ ಸ್ಥೂಲ ಪರಿಚಯ:
ರಿಯಲ್ ಎಸ್ಟೇಟ್ ಉದ್ಯಮ ಉತ್ತೇಜನಕ್ಕೆ ತೆರಿಗೆಯಲ್ಲಿ ವಿನಾಯಿತಿ ನೀಡಬಹುದು.
ಮೂಲ ಸೌಕರ್ಯ, ಆರೋಗ್ಯ ಸೇವೆ, ರಕ್ಷಣಾ ಕ್ಷೇತ್ರಗಳಿಗೆ ಆದ್ಯತೆ ನೀಡಬಹುದು.
ಆದಾಯ ತೆರಿಗೆ ಕಾಯ್ದೆಯಲ್ಲಿ ಸಡಿಲಿಕೆ ತಂದು ಬಂಡವಾಳ ಹೂಡಿಕೆಗೆ ಪ್ರೋತ್ಸಾಹಕ್ಕೆ ಅನುವು
ವಿದೇಶಿ ಕಂಪನಿಗಳ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರಳ ನಿಯಮಗಳನ್ನು ರೂಪಿಸಬಹುದು.
ಆರ್ಥಿಕ, ಗಣಿಗಾರಿಕೆ, ಬ್ಯಾಂಕಿಂಗ್ ಕ್ಷೇತ್ರದ ಖಾಸಗೀಕರಣ, ಭಾರತೀಯ ಜೀವವಿಮಾ ಕಂಪನಿಯಂತಹ ಬೃಹತ್ ಕಂಪನಿಗಳ ಅಲ್ಪ ಪ್ರಮಾಣದ ಪಾಲನ್ನು ಕೇಂದ್ರ ಮಾರಾಟಕ್ಕೆ ಮುಂದಾಗಬಹುದು.
ಸರ್ಕಾರ 4 ಸಾವಿರ ಕೋಟಿ ಡಾಲರ್ ಸಂಗ್ರಹದ ಗುರಿ ಹಾಕಿಕೊಂಡಿದೆ.
2022ಕ್ಕೆ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರ ಗುರಿ ಹಾಕಿಕೊಂಡಿದೆ. ಆರ್ಥಿಕ ವ್ಯವಸ್ಥೆಯಲ್ಲಿ ಬಹುದೊಡ್ಡ ಆಶಾಭಾವ ಹೊಂದಿದೆ.
ಎಂಎಸ್ಪಿ ಬಾಕಿ ಬಗ್ಗೆಯೂ ಸರ್ಕಾರ ನಿರ್ಧಾರ ಪ್ರಕಟಿಸುವ ನಿರೀಕ್ಷೆ ಇದೆ.
ರೈತ ಸಮ್ಮಾನ್ ಯೋಜನೆಯ ಮೊತ್ತವನ್ನ ಹೆಚ್ಚಿಸುವ ಸಾಧ್ಯತೆ ಇದೆ.
ತೈಲ ಬೆಲೆ, ಅಡುಗೆ ಎಣ್ಣೆ ಬೆಲೆ ಅಂಕುಶವಿಲ್ಲದೆ ದರ ಏರಿಕೆ ಆಗುತ್ತಿದೆ ಕಡಿವಾಣ ಹಾಕುವ ಮಾರ್ಗಗಳನ್ನು ಸರ್ಕಾರ ಕಂಡುಕೊಳ್ಳುತ್ತಾ ನೋಡಬೇಕಿದೆ.
Leave a Comment