filmy

ದುಬಾರಿ ವಾಚ್ ಸಾಗಾಟ: ವಿಮಾನ ನಿಲ್ದಾಣದಲ್ಲಿ ಸುಂಕ ಅಧಿಕಾರಿಗಳಿಂದ ನಟ ಶಾರುಖ್ ಖಾನ್ ವಿಚಾರಣೆ

ಕಳೆದ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ನಟ ಶಾರುಖ್ ಖಾನ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ತಡೆದ ಘಟನೆ ನಡೆದಿದೆ.

ಕೆಲವು ದುಬಾರಿ ವಾಚ್‌ ಗಳ ಬಗ್ಗೆ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಶಾರುಖ್ ತಂಡವನ್ನು ಗಂಟೆಗಳ ಕಾಲ ತಡೆದರು. ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿ ನೀಡುವ ಮೊದಲು ಅವರು 6.83 ಲಕ್ಷ ರೂ ಕಸ್ಟಮ್ಸ್ ಸುಂಕವನ್ನು ಪಾವತಿಸಬೇಕಾಗಿತ್ತು ಎಂದು ಮೂಲಗಳು ತಿಳಿಸಿವೆ.ಹಾಸನದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಮುಖ್ಯ ಶಿಕ್ಷಕನಿಗೆ ಧರ್ಮದೇಟು – ಬಂಧನ

ಶಾರ್ಜಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಶಾರುಖ್ ಖಾನ್ ಹಿಂತಿರುಗುತ್ತಿದ್ದರು. ಖಾಸಗಿ ಜೆಟ್‌ ನಲ್ಲಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಬಂದಿಳಿದಿದ್ದರು.

ಶಾರುಖ್ ಖಾನ್ ಮತ್ತು ಅವರ ಜೊತೆಗಿದ್ದವರು ಟರ್ಮಿನಲ್‌ ನಿಂದ ಹೊರಡುವಾಗ ಲಗೇಜ್‌ ನಲ್ಲಿ ಐಷಾರಾಮಿ ಕೈಗಡಿಯಾರಗಳು ಕಂಡುಬಂದಿವೆ.

ಶಾರುಖ್ ಮತ್ತು ಅವರ ಮ್ಯಾನೇಜರ್ ಅವರನ್ನು ಅಧಿಕಾರಿಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಹೊರಡಲು ಅನುಮತಿ ನೀಡಿದ್ದರು. ಆದರೆ ಅವರ ಅಂಗರಕ್ಷಕ ಸೇರಿದಂತೆ ಕೆಲವು ಸದಸ್ಯರನ್ನು ಇಡೀ ರಾತ್ರಿ ವಿಚಾರಣೆಗಾಗಿ ಇರಿಸಲಾಗಿತ್ತು. ಅವರುಗಳು ಹೊರಡಲು ಬೆಳಿಗ್ಗೆ ಅನುಮತಿ ನೀಡಲಾಯಿತು.

ಸುಮಾರು 18 ಲಕ್ಷ ರು ಮೌಲ್ಯದ ಆರು ದುಬಾರಿ ವಾಚ್‌ ಗಳ ಪ್ಯಾಕೇಜಿಂಗ್‌ ಗಳು ಶಾರುಖ್ ಮತ್ತು ಅವರ ಜೊತೆಯಲ್ಲಿದ್ದವರ ಬ್ಯಾಗ್ ನಲ್ಲಿ ಕಂಡುಬಂದಿವೆ ಎಂದು ವರದಿಗಳು ತಿಳಿಸಿವೆ.

ಶಾರುಖ್ ಖಾನ್ ಅವರು ನಿನ್ನೆ ಶಾರ್ಜಾ ಇಂಟರ್‌ ನ್ಯಾಶನಲ್ ಬುಕ್ ಫೇರ್ 2022 ರಲ್ಲಿ ಭಾಗವಹಿಸಿದ್ದರು.

Team Newsnap
Leave a Comment

Recent Posts

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024

ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ

ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More

April 25, 2024