ರಾಜ್ಯದಲ್ಲಿ ಎರಡು ಹಂತದಲ್ಲಿ ಶಾಲಾ ಆರಂಭಕ್ಕೆ ತಜ್ಞರು ಸೂಚಿಸಿದ್ದಾರೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಾಗೇಶ್ , ಮೊದಲು ಹಂತದಲ್ಲಿ 6 ರಿಂದ 8ನೇ ತರಗತಿ ಆರಂಭಿಸಲಾಗುತ್ತದೆ. ಆನಂತರ 1 ರಿಂದ 5ನೇ ತರಗತಿ ಶಾಲೆಗಳ ಪ್ರಾರಂಭ ಮಾಡಲಾಗುತ್ತದೆ ಎಂದರು.
ಶಿಕ್ಷಣ ತಜ್ಞರು ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡುವುದನ್ನ ಕಾಯುತ್ತಿದ್ದೇವೆ.. ಅವರ ಅನುಮತಿ ನೀಡಿದ ಕೂಡಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದು ಹೇಳಿದರು.
ಶಾಲಾ ತರಗತಿಗಳನ್ನು ಭೌತಿಕವಾಗಿ ಆರಂಭಿಸಲು ಶಿಕ್ಷಣ ಇಲಾಖೆ ಕೂಡ ಸಿದ್ಧತೆಯನ್ನು ಮಾಡುತ್ತಿದೆ. ಆದರೆ ತಜ್ಞರೊಂದಿಗೆ ಸಭೆ ನಡೆಸಿ, ಚರ್ಚಿಸಿದ ನಂತರವೇ ಅಂತಿಮವಾಗಿ ತೀರ್ಮಾನವನ್ನು ಮಾಡಲಾಗುತ್ತದೆ ಎಂದು ಹೇಳಿದರು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ