Main News

ಶಿವಮೊಗ್ಗ ಮಾದರಿಯಲ್ಲೇ ಸ್ಫೋಟ: ಮಂಡ್ಯದಲ್ಲೂ ಅನಾಹುತ ಸಂಭವ ? ಸಂಸದೆ ಸುಮಲತಾ ಎಚ್ಚರಿಕೆ

ಸರ್ಕಾರ ಮತ್ತು ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದರೆ ಶಿವಮೊಗ್ಗದ ಜಿಲೆಟಿನ್ ಸ್ಫೋಟ ಮಾದರಿಯಲ್ಲಿ , ಮಂಡ್ಯ ಜಿಲ್ಲೆಯಲ್ಲೂ ಭವಿಷ್ಯದಲ್ಲಿ ಸಂಭವಿಸಬಹುದಾದ ಅನಾಹುತದ ಬಗ್ಗೆ ಎಚ್ಚರಿಕೆ ಸಂಸದೆ ಸುಮಲತಾ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸುಮಲತಾ, ಶಿವಮೊಗ್ಗದಲ್ಲಿ ನಡೆದ ಘಟನೆ ತಿಳಿದು ತೀವ್ರ ನೋವಾಯಿತು. ನಮ್ಮೆಲರಿಗೂ ಇದೊಂದು ಎಚ್ಚರಿಕೆಯ ಗಂಟೆ. ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಈ ದುರದುಷ್ಟಕರ ಘಟನೆಯ ಹಿಂದೆ ಇರುವುದು ಗಣಿಗಾರಿಕೆಯಲ್ಲಿ ತೊಡಗಿರುವವರ ಬೇಜವಾಬ್ದಾರಿ ವರ್ತನೆ. ಕಾನೂನಿನಲ್ಲಿ ಏನೇ ಕ್ರಮ ಕೈಗೊಂಡರು ಆ ಅಮಾಯಕ ಜೀವಗಳು ಹಿಂತಿರುಗುವುದಿಲ್ಲ ಎಂದು ನೋವು ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ತಲೆಯೆತ್ತಿ ನಿಂತಿರುವ ಕಾನೂನು ಬಾಹಿರ ಗಣಿಗಾರಿಕೆಯ ವಿರುದ್ದ ನಾನು ಸತತ ಧ್ವನಿ ಎತ್ತುತ್ತಿರುವುದು ಇದೇ ಕಾಳಜಿಯಿಂದ. ಈ ಘಟನೆ ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು. ಅಕ್ರಮ ಗಣಿಗಾರಿಕೆಯ ಹಿಂದೆ ಬಹಳ ಸಲ ಸ್ಥಳೀಯ ರಾಜಕಾರಣಿಗಳು ಹಾಗೂ ಕೆಲ ಭ್ರಷ್ಟ ಅಧಿಕಾರಿಗಳ ಸಹಕಾರವಿರುತ್ತದೆ. ಸರ್ಕಾರ ಈ ಕೂಡಲೇ ಎಲ್ಲಾ ಜಿಲ್ಲಾಡಳಿತ ಅಧಿಕಾರಿಗಳಿಗೆ ಅಕ್ರಮ ಗಣಿಗಾರಿಕೆಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಬೇಕೆಂದು ಸುಮಲತಾ ಒತ್ತಾಯಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024