ಜೊತೆ ಜೊತೆಯಲಿ ಸೀರಿಯಲ್ನ ನಟ ಅನಿರುದ್ಧ್ ಹಾಗೂ ನಿರ್ಮಾಪಕರ ಮಧ್ಯೆ ಮನಸ್ತಾಪ ತಾರಕಕ್ಕೇರಿದೆ.
ಕಿರುತೆರೆಯಿಂದ ಅನಿರುದ್ಧ್ ಅವರನ್ನು ಎರಡೂ ವರ್ಷ ಬಹಿಷ್ಕಾರಿಸಲು ಕಿರುತೆರೆ ನಿರ್ಮಾಪಕರ ಸಂಘ ನಿರ್ಧಾರ ಮಾಡಿದೆ.
ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಮಾಹಿತಿ ನೀಡಿ ಅನಿರುದ್ಧ್ ಅವರನ್ನು ಬ್ಯಾನ್ ಮಾಡಿಲ್ಲ. ಆದರೆ ಅವರನ್ನು ಎರಡು ವರ್ಷ ಕಿರುತೆರೆಯಿಂದ ದೂರ ಇಡುತ್ತಿದ್ದೇವೆ.
ಏಕೆಂದರೆ ಅನಿರುದ್ಧ್ ಅವರು ಜೊತೆ ಜೊತೆಯಲಿ ಸೀರಿಯಲ್ನ ನಿರ್ದೇಶಕ ಮಧು ಉತ್ತಮ್ ಅವರಿಗೆ ಮೂರ್ಖ ಅಂತ ಕರೆದಿದ್ದಾರೆ. ಸ್ಕ್ರಿಪ್ಟ್ ವಿಚಾರಕ್ಕೆ ನಿರ್ದೇಶಕರಿಗೆ ನಿಂದಿಸಿ ಶೂಟಿಂಗ್ ಸೆಟ್ ನಿಂದ ಹೊರ ಹೋಗಿದ್ದಾರೆ ಎಂದರು.
ಧಾರಾವಾಹಿ ದೃಶ್ಯ ಬದಲಾವಣೆ ಮಾಡುವಂತೆ ನಿರ್ದೇಶಕ ಮಧು ಉತ್ತಮ್ ಜೊತೆ ಅನಿರುದ್ಧ್ ಕಿರಿಕ್ ಮಾಡಿದ್ದಾರೆ.
ಜಗದೀಶ್ ಅವರಿಗೆ ಆಗಿರುವ ಅನುಭವ ನಮಗೆ ಆಗಬಾರದು ಅಂತ ನಾವು ಈ ನಿರ್ಧಾರ ಮಾಡಿದ್ದೇವೆ ಅಷ್ಟೇ. ಹಲವು ಭಾರೀ ಜಗಳ ಆಡಿ ಶೂಟಿಂಗ್ ಸೆಟ್ನಿಂದ ಅನಿರುದ್ಧ್ ಹೊರ ನಡೆಸಿದ್ದಾರೆ. ಕಳೆದ ಎರಡು ದಿನದ ಹಿಂದೆ ಕೂಡ ಧಾರಾವಾಹಿ ತಂಡದ ಜೊತೆ ಜಗಳ ಮಾಡಿಕೊಂಡು ಶೂಟಿಂಗ್ ಮಾಡದೇ ಹೊರ ನಡೆದಿದ್ದರು. ಇದನ್ನು ಸಹಿಸಿ ಸಹಿಸಿ ಸಾಕಾಗಿದೆ.
ಹಲವು ಭಾರೀ ಈ ಘಟನೆ ಆಗಿದೆ ಅಂತ ಈ ನಿರ್ಧಾರ ಮಾಡಿದ್ದೇವೆ. ಪದೇ ಪದೇ ಹೀಗೆ ಆಗೋದನ್ನು ಸಹಿಸದೇ ಜೊತೆ ಜೊತೆಯಲಿ ತಂಡ ಧಾರವಾಹಿಯಿಂದ ಕೈ ಬಿಡಲು ನಿರ್ಧರಿಸಿದೆ ಎಂದು ಹೇಳಿದರು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ