- ಮೇ 3 ರಂದು ಮೇಲ್ಮನವಿ ವಿಚಾರಣೆ
ಸೂರತ್:
ಮಾನಹಾನಿ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಸೂರತ್ ಜಿಲ್ಲಾ ನ್ಯಾಯಲಯವು ಏ 13ರ ವರೆಗೆ ಜಾಮೀನು ವಿಸ್ತರಣೆ ಮಾಡಿದೆ.
ಈ ನಡುವೆ ಕೊರ್ಟ್ ಆದೇಶ ಪ್ರಶ್ನಿಸಿ ಸೆಷನ್ಸ್ ನ್ಯಾಯಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಮೇಲ್ಮನವಿ ಅರ್ಜಿಯನ್ನು ಮೇ 3 ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.
ಸೋಮವಾರ ದೆಹಲಿಯಿಂದ ಸಹೋದರಿ ಪ್ರಿಯಾಂಕಾ ಗಾಂಧಿಯೊಂದಿಗೆ ಹೊರಟ ರಾಹುಲ್ ಗಾಂಧಿ ಮಧ್ಯಾಹ್ನ ವೇಳೆಗೆ ಸೂರತ್ ತಲುಪಿ ಕೋರ್ಟ್ ಮುಂದೆ ಹಾಜರಾದರು.
ಜಿಲ್ಲಾ ನ್ಯಾಯಲಯ ನೀಡಿದ ಆದೇಶ ರದ್ದು ಮಾಡಬೇಕು, ವಿಚಾರಣೆ ಅಂತ್ಯವಾಗುವವರೆಗೂ ಮಧ್ಯಂತರ ತಡೆ ನೀಡಬೇಕು ಎಂದು ರಾಗಾ ಪರ ವಕೀಲರು ಮನವಿ ಮಾಡಿದರು.
ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಲಯ ಮೇ 3 ರಂದು ವಿಚಾರಣೆ ನಡೆಸಲಾಗುವುದು, ಏಪ್ರಿಲ್ 13ರ ವರೆಗೂ ಜಾಮೀನು ವಿಸ್ತರಿಸಿದೆ ಎಂದು ತಿಳಿಸಿತು.
ರಾಹುಲ್ ಗಾಂಧಿ ವಿಚಾರಣೆ ಹಿನ್ನೆಲೆ ಸಾವಿರಾರು ಕಾರ್ಯಕರ್ತರು ಕೋರ್ಟ್ ಆವರಣದಲ್ಲಿ ಜಮಾಯಿಸಿದ್ದರು.ಇದನ್ನು ಓದಿ –ಬೆಂಗಳೂರಿನಲ್ಲಿ ಅಗ್ನಿ ದುರಂತ – 8 ಮಂದಿ ದಹನ
ರಾಹುಲ್ ಗಾಂಧಿ ವಿಚಾರಣೆ ವೇಳೆ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಸೆಷನ್ಸ್ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ
ಹೊಸ ಜಿಲ್ಲೆಗಳ ಘೋಷಣೆ ಬಗ್ಗೆ ಪ್ರಸ್ತಾವನೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ