ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಫೆಬ್ರವರಿ 16ವರೆಗೂ ಕಾಲೇಜುಗಳಿಗೆ ರಜೆಯನ್ನು ಸಕಾ೯ರ ವಿಸ್ತರಣೆ ಮಾಡಿದೆ.
ಬುಧವಾರದವರೆಗೆ ಕಾಲೇಜುಗಳು ರಜೆ ಘೋಷಣೆ ಮಾಡಲಾಗಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಮತ್ತೆ ನಿರ್ಧಾರ ಮಾಡಲಾಗುವುದು.
ಪಿಯುಸಿಯಿಂದ ಡಿಗ್ರಿ ಹಾಗೂ ಪೋಸ್ಟ್ ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ.
ರಾಜ್ಯದಲ್ಲಿ ಹಿಜಾಬ್ ವಿವಾದ ಸದ್ಯ ಪ್ರಕರಣ ಹೈಕೋರ್ಟ್ನಲ್ಲಿದೆ. ಕೆಲವು ಕಾಲೇಜುಗಳಲ್ಲಿ ಗಲಾಟೆ ಸಂಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿತ್ತು. ಇದೀಗ ಮತ್ತೆ ಆ ರಜೆಯನ್ನು ವಿಸ್ತರಣೆ ಮಾಡಿ ಆದೇಶ ನೀಡಿದೆ.