ದೆಹಲಿ: ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆಯ ಕುರಿತು ಪ್ರಸಕ್ತ ವೇಳೆಯಲ್ಲಿ ಯಾವುದೇ ಯೋಜನೆ ಇಲ್ಲ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸಂಪುಟ ಪುನರ್ ರಚನೆ ಬಗ್ಗೆ ಮಾಧ್ಯಮಗಳು ವಿವಿಧ ಅಂದಾಜುಗಳನ್ನು ಹೊರಹಾಕುತ್ತಿವೆ. ಸಹಿತ, ಸಾಧ್ಯಕರ ಪಟ್ಟಿಯನ್ನು ಕೂಡ ಪ್ರಕಟಿಸುತ್ತಿವೆ. ಆದರೆ, ಈ ವಿಷಯಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳಿಗೆ ಮಾಧ್ಯಮಗಳು ಸ್ವತಃ ಉತ್ತರಿಸಬೇಕು. ನಾನು ಯಾವುದೇ ರೀತಿಯ ಪುನರ್ ರಚನೆ ಅಥವಾ ವಿಸ್ತರಣೆ ಕುರಿತು ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ನಡೆಸಿಲ್ಲ,” ಎಂದು ತಿಳಿಸಿದರು.
ನಾಗೇಂದ್ರ ಅವರ ಸಂಪುಟ ಸೇರ್ಪಡೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಎಂ, “ನಾಗೇಂದ್ರ ಅವರು ಮುಂದಿನ ದಿನಗಳಲ್ಲಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ, ಆದರೆ ಅದಕ್ಕೆ ಇನ್ನೂ ಸಮಯವಿದೆ,” ಎಂದು ಹೇಳಿಕೆ ನೀಡಿದರು.ಇದನ್ನು ಓದಿ –ನಾನು ಶಾಸಕನಾಗಲು ಅಥವಾ ಸಂಸದನಾಗಲು ಎಂದೂ ಹಪಹಪಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಈ ಮೂಲಕ ಸಚಿವ ಸಂಪುಟ ಪುನರ್ ರಚನೆ ಸಂಬಂಧ ಹರಿದಾಡುತ್ತಿರುವ ವರದಿಗಳಿಗೆ ಅವರು ಸ್ಪಷ್ಟನೆ ನೀಡಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು