ಫೆ 12 ರಂದು ತಮಿಳುನಾಡಿನ ವಿರುಧುನಗರದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 19 ಜನ ಪ್ರಾಣ ಕಳೆದುಕೊಂಡಿದ್ದಾರೆಂದು ವಿರುಧುನಗರದ ಜಿಲ್ಲಾಧಿಕಾರಿ ಆರ್ ಕಣ್ಣನ್ ತಿಳಿಸಿದ್ದಾರೆ.
ಫೆಬ್ರವರಿ 12 ರ ಮಧ್ಯಾಹ್ನ ಸುಮಾರು 1 ಗಂಟೆ ವೇಳೆ ಸತ್ತೂರು ಬಳಿಯ ಅಚಂಕುಲಂ ಗ್ರಾಮದ ಪಟಾಕಿ ದೊಡ್ಡ ಮಟ್ಟದ ಶಬ್ಧ ಕೇಳಿ ಬಂದಿತು. ನಂತರ ಭಾರಿ ಬೆಂಕಿಕಾಣಿಸಿಕೊಂಡಿದೆ ಎಂದರು.
ಪಟಾಕಿ ತಯಾರಿಕೆಗೆ ಬಳಸುವ ರಾಸಾಯನಿಕ ಬೆರೆಸುವ ವೇಳೆ ಸ್ಫೂಟ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಶಕ್ತಿವೇಲ್ ಒಡೆತನದ ಈ ಕಾರ್ಖಾನೆಯಲ್ಲಿ ನೂರಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಈ ಘಟಕಕ್ಕೆ ಫ್ಯಾನ್ಸಿ ಕ್ರ್ಯಾಕರ್ ತಯಾರಿಸುವ ಪರವಾನಿಗೆ ಇದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಅಗ್ನಿಶಾಮಕದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಅಗ್ನಿಅವಘಡದಲ್ಲಿ 9 ಜನ ಸ್ಥಳದಲಿಯೇ ಸಾವನ್ನಪ್ಪಿದ್ದಾರೆ.
30 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸತ್ತೂರು, ಕೋವಿಲ್ಪಟ್ಟಿ ಮತ್ತು ಸಿವಕಾಸಿ ಆಸ್ಪತ್ರೆಗಳಲ್ಲಿ ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
5 ಲಕ್ಷ ರು ಪರಿಹಾರ
ಘಟನೆಯಲ್ಲಿ ಪ್ರಾಣಕಳೆದು ಕೊಂಡವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಚ, ತಮಿಳುನಾಡಿನ ಸಿಎಂ ಕೆ. ಪಳನಿಸ್ವಾಮಿ ಸರ್ಕಾರ ತಲಾ 3 ಲಕ್ಷ ಮತ್ತು ಘಟನೆಯಲ್ಲಿ ಗಾಯಗೊಂಡ ಕುಟುಂಬಕ್ಕೆ 1 ಲಕ್ಷ ಪರಿಹಾರ ಧನ ಘೋಷಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ