ತಾನು ಎಸಿಬಿ ಅಧಿಕಾರಿ ಎಂದು ಹೇಳಿಕೊಂಡು ರಾಣೆಬೆನ್ನೂರು ನಗರಸಭೆ ಅಧಿಕಾರಿಗಳನ್ನು ವಂಚನೆ ಮಾಡಲು ಹೋಗಿ ಬೆಂಗಳೂರಿನ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ
ಬೆಂಗಳೂರಿನ ಹಲಸೂರು ನಿವಾಸಿ ಜಾನಮೇಕ್ ಅಲಿಯಾಸ್ ಜಾನ್ ಮ್ಯಾಥ್ಯೂ ಪೊಲೀಸರ ಕೈಗೆ ಸಿಕ್ಕು ಜೈಲು ಸೇರಿದ ನಕಲಿ ಎಸಿಬಿ ಅಧಿಕಾರಿ.
ರಾಣೆಬೆನ್ನೂರು ನಗರಸಭೆಯ ಆಯುಕ್ತ ಉದಯಕುಮಾರ್ ತಳವಾರರ ಬಳಿ ಜಾನಮೇಕ್ ಬಂದಿದ್ದಾನೆ.
ಈ ವೇಳೆ ನಗರಸಭೆ ಕಚೇರಿಯಲ್ಲಿ ಎಂಜನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹೇಶ್ ಗುಡಿಸಲಮನಿ ಹೆಸರು ಎಸಿಬಿ ಅಧಿಕಾರಿಗಳ ದಾಳಿ ಮಾಡುವ ಲಿಸ್ಟ್ನಲ್ಲಿದೆ ಎಂದು ಹೆದರಿಸಿದ್ದಾನೆ.
ಆಗ ಜಾನಮೇಕ್ ನೀವು ಹಣ ನೀಡಿದರೆ ನಮ್ಮ ಮೇಲಿನ ಎಸಿಬಿ ಅಧಿಕಾರಿಗಳಿಗೆ ಹೇಳಿ ಅವರ ಹೆಸರನ್ನು ಆ ಲಿಸ್ಟ್ನಿಂದ ತೆಗೆಸುತ್ತೇನೆ ಎಂದು ಮೋಸದಿಂದ ಹಣ ಪಡೆಯಲು ಪ್ರಯತ್ನಿಸುತ್ತಾನೆ.
ಆಗ ಉದಯಕುಮಾರ್ ಅವರು ಜಾನಮೇಕ್ ನಕಲಿ ಎಸಿಬಿ ಅಧಿಕಾರಿ ಎಂಬುದನ್ನು ಅರಿತು ತಕ್ಷಣವೇ ರಾಣೆಬೆನ್ನೂರು ನಗರ ಠಾಣೆಯ ಪೊಲೀಸರ ಗಮನಕ್ಕೆ ತಂದು ಪ್ರಕರಣ ದಾಖಲಿಸಿದ್ದಾರೆ.
ನಕಲಿ ಎಸಿಬಿ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಜಾನಮೇಕ್ ನನ್ನು ಬಂಧಿಸಿದ್ದಾರೆ.
ಬಂಧಿತನ ಮೇಲೆ ಐಪಿಸಿ ಸೆಕ್ಷನ್ 385, 418, 419, 420, 511 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
This website uses cookies.
Leave a Comment