ನಕಲಿ ವಿಶ್ವವಿದ್ಯಾಲಯದ ಹೆಸರಿನ ಮೂಲಕ ಗೌರವ ಡಾಕ್ಟರೇಟ್ ನೀಡಲು ಮುಂದಾದ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ.
ಮೈಸೂರಿನ ಖಾಸಗಿ ಹೋಟೆಲೊಂದರಲ್ಲಿ ಇಂಟರ್ನ್ಯಾಷನಲ್ ಗ್ಲೋಬಲ್ ಪೀಸ್ ವಿಶ್ವವಿದ್ಯಾಲಯ ಎಂಬ ನಕಲಿ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಆಯೋಜಕರ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನಲೆಯಲ್ಲಿ, ಡಿಸಿಪಿ ಪ್ರಕಾಶ್ ಗೌಡ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು 150 ಜನರಿಂದ ಹಣ ಪಡೆದು ಗೌರವ ಡಾಕ್ಟರೇಟ್ ನೀಡಲು ಮುಂದಾಗಿದ್ದರು. ಕೇವಲ ರಾಜ್ಯ ಮಾತ್ರವಲ್ಲದೇ ದೇಶದ ಇತರೆ ಭಾಗಗಳಲ್ಲೂ ಇದೇ ರೀತಿಯ ಕಾರ್ಯಕ್ರಮಗಳನ್ನು ದುಷ್ಕರ್ಮಿಗಳು ಆಯೋಜಿಸಿದ್ದರು ಎಂದು ತಿಳಿದು ಬಂದಿದೆ.
ನಕಲಿದಂಧೆಯ ಬಗ್ಗೆ ತಿಳಿಯದ ಹರಿಹರದ ಶಾಸಕ ರಾಮಪ್ಪ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಪೋಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸುತ್ತಿದ್ದಂತೆಯೇ ಉಳಿದ ಆಯೋಜಕರು ಪರಾರಿಯಾಗಿದ್ದಾರೆ. ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ದೂರನ್ನು ದಾಖಲಿಸಿಕೊಂಡಿರುವ ಪೋಲೀಸರು, ಕಾರ್ಯಕ್ರಮದ ಪ್ರಶಸ್ತಿ ಪತ್ರ, ಸ್ಮರಣಿಕೆಗಳನ್ನು ವಶಕ್ಕೆ ಪಡೆದಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment