KRSನಲ್ಲಿ ಕುಸಿದ ನೀರಿನ ಮಟ್ಟ –ವರ್ಷಾಂತ್ಯಕ್ಕೆ ಕುಡಿಯುವ ನೀರಿಗೂ ಪರದಾಟ

Team Newsnap
1 Min Read

ಮಂಡ್ಯ: ಕೆಆರ್‍ಎಸ್‍ನಲ್ಲಿ 10 ಟಿಎಂಸಿ ನೀರು ಖಾಲಿಯಾಗಿದೆ. ಈ ನಡುವೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದನ್ನು ಗುರುವಾರ ಸಂಜೆಯಿಂದ ಬಂದ್ ಮಾಡಿದೆ.

ಈಗ ಜಲಾಶಯದಲ್ಲಿ 25 ಟಿಎಂಸಿಯಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಮತ್ತೆ ಮಳೆಯಾಗದಿದ್ದರೆ ಡಿಸೆಂಬರ್ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ.

ಕೆಆರ್‍ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ವಿಚಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೂ ತಮಿಳುನಾಡಿಗೆ ನೀರು ಹರಿಸಲಾಗಿತ್ತು. ಇದರಿಂದ ಕೆಆರ್‍ಎಸ್ ಡ್ಯಾಂ ನೀರಿನ ಮಟ್ಟ ಕುಸಿತವಾಗಿದೆ. 15 ದಿನಗಳ ಹಿಂದೆ 113 ಅಡಿ ನೀರು ಸಂಗ್ರಹವಾಗಿತ್ತು. ಈಗ 102 ಅಡಿಗೆ ಕುಸಿತ ಕಂಡಿದೆ. ಈಗ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ.

ಮಳೆಯಾಗದೆ ಇದ್ದರೆ ಡಿಸೆಂಬರ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ. ಇನ್ನೂ ಬೇಸಿಗೆಯಲ್ಲಂತೂ ಹನಿ ನೀರಿಗೂ ಪರದಾಡಬೇಕಾದ ಸ್ಥಿತಿ ಎದುರಾಗಲಿದೆ. ಡ್ಯಾಂನಿಂದ ನಾಲೆಗಳ ಮೂಲಕ ಕುಡಿಯುವ ಉದ್ದೇಶಕ್ಕಾಗಿ ನೀರು ಬಿಡುಗಡೆ ಮುಂದುವರೆಸಲಾಗಿದೆ. ಕಾವೇರಿ ನೀರಾವರಿ ನಿಗಮ 5,743 ಕ್ಯೂಸೆಕ್ ನೀರನ್ನು ಇದಕ್ಕಾಗಿ ಬಿಡುಗಡೆ ಮಾಡುತ್ತಿದೆ.ಕಾವೇರಿ ನೀರು ಹಂಚಿಕೆ: ಸೆ. 1ಕ್ಕೆ ವಿಚಾರಣೆ- ನೀರಿನ ಹಂಚಿಕೆ ವಿಷಯದಲ್ಲಿ ನಾವು ತಜ್ಞರಲ್ಲ : ಕೋರ್ಟ್

ಕೆಆರ್‍ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ

  • ಗರಿಷ್ಠ ಮಟ್ಟ – 124.80 ಅಡಿಗಳು
  • ಇಂದಿನ ಮಟ್ಟ – 102.74 ಅಡಿಗಳು
  • ಗರಿಷ್ಠ ಸಾಂದ್ರತೆ – 49.452 ಟಿಎಂಸಿ
  • ಇಂದಿನ ಸಾಂದ್ರತೆ – 25.035 ಟಿಎಂಸಿ
  • ಒಳ ಹರಿವು – 3,276 ಕ್ಯೂಸೆಕ್
  • ಹೊರ ಹರಿವು – 5,743 ಕ್ಯೂಸೆಕ್

Share This Article
Leave a comment