Trending

ಸಲಿಂಗ ಸಂಬಂಧ ಬೇಡ ಎಂದ ಕುಟುಂಬಸ್ಥರು – ಪೋಲಿಸರ ಮೊರೆ ಹೋದ ಯುವತಿಯರು

ಸಲಿಂಗ ಸಂಬಂಧಕ್ಕೆ ಕುಟುಂಬಸ್ಥರು ವಿರೋಧದಿಂದಾಗಿ ಬೇಸರಗೊಂಡ ಹುಡುಗಿಯರಿಬ್ಬರು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋದ ಘಟನೆ ಬಿಹಾರ್‌ನಲ್ಲಿ ಜರುಗಿದೆ. ಬಿಹಾರ್ ದ ಇಂದ್ರಪುರಿ ನಿವಾಸಿ ತಾನಿಷ್ಕ್ ಶ್ರೀ ಮತ್ತು ಪಾಟ್ನಾದ ಸಹರ್ಸಾ ನಿವಾಸಿ ಶ್ರೇಯಾ ಘೋಷ್ ಒಟ್ಟಿಗೆ ವಾಸಿಸಲು ಬಯಸಿದ್ದರು.

ಆದರೆ ಅವರ ಎರಡೂ ಕುಟುಂಬ ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಿ ತನಿಷ್ಕ್ ಶ್ರೀ ಪ್ರೀತಿಯನ್ನು ತಿಳಿದ ನಂತರ ಅವರ ಮನೆಯವರು ಆಕೆಯನ್ನು ಗೃಹಬಂಧನದಲ್ಲಿ ಇಟ್ಟಿದ್ದರು. ಆಕೆ ಮೊಬೈಲ್‌ ಅನ್ನು ಕಸಿದುಕೊಂಡಿದ್ದರು. ಈ ವೇಳೆ ಸಿನಿಮಾ ನೋಡುವುದಾಗಿ ಸುಳ್ಳು ಹೇಳಿ ಹೊರಬಂದಿದ್ದ ಇಬ್ಬರೂ ಪರಸ್ಪರ ಭೇಟಿಯಾಗಿದ್ದಾರೆ. ನಂತರ ಇಬ್ಬರೂ ತಮಗೆ ರಕ್ಷಣೆ ನೀಡುವಂತೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಭಾರತದಲ್ಲಿ ಇನ್ನು ಮುಂದೆ ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು 2018ರ ಸೆಪ್ಟೆಂಬರ್‌ ತಿಂಗಳು ಮಹತ್ವದ ತೀರ್ಪು ನೀಡಿದ್ದಾರೆ.

ಇದನ್ನು ಓದಿ :PSI ನೇಮಕಾತಿ ಅಕ್ರಮ: ನಾಗಮಂಗಲ ಯೂತ್ ಕಾಂಗ್ರಸ್ ಮಾಜಿ ಅಧ್ಯಕ್ಷ ಶರತ್ ಬಂಧನ

ಆದರೂ ಭಾರತದಲ್ಲಿ ಅನೇಕ ಸಂದರ್ಭಗಳಲ್ಲಿ ಸಲಿಂಗ ಸಂಬಂಧವನ್ನು ಮುಕ್ತವಾಗಿ ಒಪ್ಪಿಕೊಳ್ಳಲು ಸಾಧ್ಯವಾಗಿಲ್ಲ. ಇಂತಹದ್ದೇ ತೊಂದರೆಯನ್ನು ಈಗ ಬಿಹಾರ್‌ನ ಇಬ್ಬರು ಹುಡುಗಿಯರು ಎದುರಿಸುತ್ತಿದ್ದಾರೆ.

ತಾವಿಬ್ಬರೂ ಐದು ವರ್ಷಗಳಿಂದ ಪರಸ್ಪರ ಸ್ನೇಹಿತರು . ಇಬ್ಬರೂ ಒಟ್ಟಿಗೆ ಇರಲು ಬಯಸಿದ್ದೇವೆ. ನಾವು 18 ವಯಸ್ಸು ಮೇಲ್ಪಟ್ಟವರಾಗಿದ್ದೇವೆ. ಆದರೆ ನಮ್ಮ ಕುಟುಂಬ ಸದಸ್ಯರು ಒಟ್ಟಿಗೆ ಇರಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

ತನ್ನ ಸಂಗಾತಿಯ ಮಾತಿಗೆ ಧ್ವನಿಗೂಡಿಸಿದ ಶ್ರೇಯಾ ಘೋಷ್, ನಾನು ನನ್ನ ಸ್ನೇಹಿತ ತಾನಿಷ್ಕ್ ಶ್ರೀ ಜೊತೆ ಇರಲು ಬಯಸುತ್ತೇನೆ. ನಾವಿಬ್ಬರೂ ಒಟ್ಟಿಗೆ ವಾಸಿಸಲು ನಿರ್ಧರಿಸಿದ್ದೇವೆ. ಇದು ನನ್ನ ಸ್ನೇಹಿತೆ ಕುಟುಂಬಕ್ಕೆ ಇಷ್ಟವಿಲ್ಲ ಎಂದು ದೂರಿದ್ದಾರೆ. ಇಬ್ಬರ ಮನವಿಯನ್ನು ಆಲಿಸಿರುವ ಎಸ್‌ಎಸ್‌ಪಿ, ವಿಚಾರಣೆ ನಡೆಸಿ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024