ಬದುಕಿನಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಹುಮ್ಮಸ್ಸಿದ್ದವರಿಗೆ ಖಂಡಿತವಾಗಿಯೂ ಯಶಸ್ಸು ಸಿಕ್ಕೇ ಸಿಗುತ್ತದೆ.ಅಂತಹ ಘಟನೆವೊಂದು ಉತ್ತರ ಪ್ರದೇಶದ ಹಾಪುರ್ದಲ್ಲಿ ನಡೆದಿದೆ.
ಅತ್ತೆಯ ಕಿರುಕುಳದಿಂದಲೇ ಸ್ಫೂರ್ತಿ ಪಡೆದ ಏಳು ವರ್ಷದ ಮಗುವಿನ ತಾಯಿಯೊಬ್ಬಳು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದಾರೆ. ಇದರ ಜೊತೆಗೆ ಇತರ ಹೆಣ್ಣು ಮಕ್ಕಳಿಗೂ ಮಾದರಿಯಾಗಿದ್ದಾರೆ.
ಇದನ್ನು ಓದಿ – ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಗ 14 ಬಾರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ
ಉತ್ತರ ಪ್ರದೇಶದ ಹಾಪುರ್ದ ಶಿವಾಂಗಿ ಗೋಯಲ್ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 177ನೇ ಸ್ಥಾನ ಪಡೆದುಕೊಂಡಿದ್ದಾರೆ. ಗಂಡನ ಮನೆಯಲ್ಲಿ ಗಂಡ , ಮಾವ ಅತ್ತೆ ನೀಡುತ್ತಿದ್ದ ಕಿರುಕುಳದಿಂದಾಗಿಯೇ IAS ಅಧಿಕಾರಿಯಾಗಬೇಕೆಂಬ ನಿರ್ಧಾರ ಕೈಗೊಂಡು, ಇದೀಗ ಅದರಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಕೆಲ ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಶಿವಾಂಗಿಗೆ ಅತ್ತೆ – ಮಾವ ನಿತ್ಯ ಕಿರುಕುಳ ನೀಡಲು ಶುರು ಮಾಡಿದ್ದರು. ಇದರ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾರೆ. ಇಷ್ಟಾದರೂ, ಗಂಡನ ಮನೆಯವರ ಕಿರುಕುಳ ನಿಲ್ಲುವುದಿಲ್ಲ. ಹೀಗಾಗಿ, ಪೋಷಕರ ಮನೆಗೆ ವಾಪಸ್ ಆಗಿ, ತಂದೆ-ತಾಯಿ ಜೊತೆ ಜೀವನ ನಡೆಸಲು ಮುಂದಾಗುತ್ತಾರೆ. ಈ ವೇಳೆ ಶಿವಾಂಗಿ ತಂದೆ, ನೀನು ಏನು ಮಾಡಬೇಕೋ ಅಂದುಕೊಂಡಿದ್ದೀಯಾ ಅದನ್ನು ಮಾಡು ಎಂದು ಕಿವಿಮಾತು ಹೇಳುತ್ತಾರೆ. ಈ ವೇಳೆ ಯುಪಿಎಸ್ಸಿ ಪರೀಕ್ಷೆ ತಯಾರಿ ಮಾಡುವ ನಿರ್ಧಾರ ಕೈಗೊಳ್ಳುತ್ತಾರೆ.
ಮುದವೆಗೂ ಮುನ್ನ ಎರಡು ಸಲ ಪ್ರಯತ್ನಿಸಿ, ವಿಫಲವಾಗಿದ್ದ ಶಿವಾಂಗಿ, 2019ರಿಂದಲೂ ಕೌಟುಂಬಿಕ ಸಮಸ್ಯೆ ನಡುವೆ ಕೂಡ ತಯಾರಿ ನಡೆಸಿ, ಅದರಲ್ಲಿ ಯಶಸ್ವಿಯಾಗಿದ್ದು, 177ನೇ ಸ್ಥಾನ ಪಡೆದುಕೊಂಡಿದ್ದಾರೆ.
ಮಹಿಳೆಯರಿಗೆ ಧೈರ್ಯ ತುಂಬಿದ ಶಿವಾಂಗಿ: ವಿವಾಹಿತ ಮಹಿಳೆಯರು ಅತ್ತೆಯ ಮನೆಯಲ್ಲಿ ಕಿರುಕುಳ, ತೊಂದರೆ ಅನುಭವಿಸಿದರೆ ಭಯ ಪಡುವ ಅಗತ್ಯವಿಲ್ಲ. ನಿಮ್ಮ ಕಾಲಿನ ಮೇಲೆ ನಿಲ್ಲುವ ನಿರ್ಧಾರ ಕೈಗೊಳ್ಳಿ. ಕಷ್ಟಪಟ್ಟು ಕೆಲಸ ಮಾಡಿದರೆ ಎಂತಹ ಪರೀಕ್ಷೆ ಸಹ ಸುಲಭವಾಗಿ ಎದುರಿಸಬಹುದು ಎಂದು ಕಿವಿಮಾತು ಹೇಳಿದ್ದಾರೆ.
ಎರಡು ಸಲ ಪ್ರಯತ್ನಿಸಿ ವಿಫಲ: ಮದುವೆ ಮಾಡಿಕೊಳ್ಳುವುದಕ್ಕೂ ಮುನ್ನವೇ IAS ಆಗಬೇಕೆಂಬ ಆಸೆ ಇತ್ತು. ಹೀಗಾಗಿ, ಎರಡು ಸಲ ಪ್ರಯತ್ನಿಸಿದ್ದೆ. ಆದರೆ, ಅದರಲ್ಲಿ ಯಶಸ್ಸು ಕಂಡಿರಲಿಲ್ಲ. ಇದಾದ ಬಳಿಕ ಮದುವೆ ಮಾಡಿಕೊಂಡು, ಅತ್ತೆ ಮನೆಯಿಂದ ಕೌಟುಂಬಿಕ ಸಮಸ್ಯೆ ಎದುರಿಸಿದ್ದೇನೆ. ಇದೀಗ ನಾನು ಅಂದುಕೊಂಡಿರುವುದನ್ನ ಸಾಧಿಸಿದ್ದೇನೆ ಎಂದು ಶಿವಾಂಗಿ ಹೇಳಿದ್ದಾರೆ.
ನನ್ನ ಯಶಸ್ಸಿನ ಶ್ರೇಯ ತಂದೆ – ತಾಯಿ ಹಾಗೂ ನನ್ನ 7 ವರ್ಷದ ಮಗುವಿಗೆ ಸಲ್ಲಬೇಕು ಎಂದು ಶಿವಾಂಗಿ ಹೇಳಿಕೊಂಡಿದ್ದಾರೆ. ವಿವಾಹಿತ ಶಿವಾಂಗಿ ಸಾಧನೆಗೆ ಇದೀಗ ಇನ್ನಿಲ್ಲದ ಅಭಿನಂದನೆ ಹರಿದು ಬರುತ್ತಿದೆ. ಶಿವಾಂಗಿ ಸಮಾಜಶಾಸ್ತ್ರ ವಿಷಯದಲ್ಲಿ ಪರೀಕ್ಷೆ ಎದುರಿಸಿದ್ದಾರೆ.
ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಒಟ್ಟು 685 ಅಭ್ಯರ್ಥಿಗಳು ಪಾಸ್ ಆಗಿದ್ದು, ಇದರಲ್ಲಿ 508 ಪುರುಷ ಅಭ್ಯರ್ಥಿಗಳು, 117 ಮಹಿಳೆಯರು ಇದ್ದಾರೆ. ವಿಶೇಷವೆಂದರೆ ಟಾಪ್ 25ರಲ್ಲಿ 15 ಪುರುಷರು ಹಾಗೂ 10 ಮಹಿಳೆಯರಿದ್ದು, ಮೊದಲ ನಾಲ್ಕು ಸ್ಥಾನ ಮಹಿಳಾ ಅಭ್ಯರ್ಥಿಗಳ ಪಾಲಾಗಿವೆ. ಕರ್ನಾಟಕದ 27 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment