ಕುಟುಂಬ ರಾಜಕಾರಣವಿದ್ದಷ್ಟು ವಂಶ ವೃಕ್ಷ ಬೆಳೆಯುತ್ತದೆ. ಪರಸ್ಪರ ಹಿರಿಯರಿಗೆ ಗೌರವ ಸಿಗುತ್ತದೆ. ಮೋದಿ ಮಕ್ಕಳು ಮಾಡದಿದ್ದರೆ ಅದು ನನ್ನ ತಪ್ಪಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ವ್ಯಂಗ್ಯವಾಡಿದರು
ಇದನ್ನು ಓದಿ:ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ರಾಹಿಂ , ನಾವು ರೈತರು ಕಾಳು ಬೆಳೆದರೆ ಮಾರುವ ಕಾಳು ಬೇರೆ, ಬಿತ್ತನೆ ಕಾಳು ಬೇರೆ ಎಂದು ಇಟ್ಟುಕೊಳ್ಳುತ್ತೇವೆ. ಹಾಗೆಯೇ ಬಿಜೆಪಿ ಅವರಿಗೆ ಮೋದಿ ಅಭಿಮಾನವಿದ್ದರೆ ನಮಗೆ ದೇವೇಗೌಡ ಅಭಿಮಾನ. ಕುಟುಂಬ ರಾಜಕಾರಣದಿಂದ ಗೌರವ ಬೆಳೆಯುತ್ತದೆ ಎಂದರು
ಕಾಂಗ್ರೆಸ್ನಲ್ಲೂ ಕುಟುಂಬ ರಾಜಕಾರಣ ಇತ್ತು. ಇಂದಿರಾಗಾಂಧಿ ನಂತರ, ರಾಜೀವ್ಗಾಂಧಿ, ಸೋನಿಯಾಗಾಂಧಿ, ರಾಹುಲ್ ಗಾಂಧಿ ಅಧಿಕಾರಕ್ಕೆ ಬರಲಿಲ್ಲವೇ? ಈಗ ಮೋದಿ ಅವರು ಮಕ್ಕಳು ಮಾಡದೇ ಇದ್ರೆ ಅದು ನನ್ನ ತಪ್ಪಾ ಅಂದು ಹಾಸ್ಯ ಮಾಡಿದರು
ಪಠ್ಯಪುಸ್ತಕ ವಿಚಾರದಲ್ಲಿ ಬಸವಣ್ಣ, ಕುವೆಂಪು ಸೇರಿದಂತೆ ಅನೇಕರ ವಿಚಾರದಲ್ಲಿ ಅಪಮಾನ ನಡೆಯುತ್ತಿದೆ. ಹೀಗಿದ್ದೂ ಬೊಮ್ಮಾಯಿ ಯಾಕೆ ಈ ತಪ್ಪು ಕೆಲಸ ಮಾಡುತ್ತಿದ್ದೀರಿ? ಬಸವ ಪರಂಪರೆಯಲ್ಲಿ ಹುಟ್ಟಿ ಯಾಕೆ ಈ ಅವಮಾನ ಮಾಡುತ್ತಿದ್ದೀರಿ? ಈ ಬಗ್ಗೆ ಸಮಿತಿ ಮಾಡಿ ಅವರಿಗೆ ಶಿಕ್ಷೆಗೊಳಪಡಿಸಬೇಕು? ಎಂದು ಆಗ್ರಹಿಸಿದ್ದಾರೆ.
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ