ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ವೀಡಿಯೋ ಕರೆ ಮಾಡಿ, ಶಿವಮೊಗ್ಗ ಜೈಲು ವಾಡ೯ನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ವಸತಿ ಗೃಹದಲ್ಲಿ ನಡೆದಿದೆ.
ಕೇಂದ್ರ ಕಾರಾಗೃಹದ ವಾರ್ಡನ್ ಅಸ್ಪಾಕ್ ತಗಡಿ (24) ಆತ್ಮಹತ್ಯೆ ಮಾಡಿಕೊಂಡವರು.
ಅಸ್ಪಾಕ್ ತಗಡಿ ಮೂಲತಃ ಬೆಳಗಾವಿ ಜಿಲ್ಲೆ ಹುಕ್ಕೇರಿ ನಿವಾಸಿ. ಕಳೆದ ಎರಡೂವರೆ ವರ್ಷದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಾರ್ಡನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿದ್ದ ಅಸ್ಪಾಕ್ ತಗಡಿಗೆ ಒಂದೂವರೆ ತಿಂಗಳ ಮಗುವಿದ್ದು, ಪತ್ನಿ ಬಾಣಂತನಕ್ಕೆ ತವರು ಮನೆಗೆ ತೆರಳಿದ್ದರು.
ವಿವಾಹವಾದ ಎರಡು ಮೂರು ತಿಂಗಳ ನಂತರದಿಂದಲೇ ಸಣ್ಣ ಪುಟ್ಟ ವಿಷಯಕ್ಕೆ ಪತಿ ಪತ್ನಿ ಇಬ್ಬರು ಜಗಳ ಆಡುತ್ತಿದ್ದರು ಎನ್ನಲಾಗಿದೆ.
ಬುಧವಾರ ರಾತ್ರಿ ಸಹ ಪತ್ನಿಗೆ ವೀಡಿಯೋ ಕರೆ ಮಾಡಿದ್ದ ಅಸ್ಪಾಕ್ ತಗಡಿ ಈ ವೇಳೆಯೂ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಅಲ್ಲದೇ ಅತ್ತೆ ಮಾವನೊಂದಿಗೂ ಸಹ ಜಗಳವಾಡಿದ್ದಾನೆ ಎನ್ನಲಾಗಿದೆ.
ಜಗಳ ಆಡುತ್ತಿರುವಾಗಲೇ ನೇಣು ಹಾಕಿಕೊಳ್ಳುವ ದೃಶ್ಯವನ್ನು ಪತ್ನಿಗೆ ತೋರಿಸಿದ್ದಾನೆ. ಪತಿಯ ಆತ್ಮಹತ್ಯೆ ನಿರ್ಧಾರಕ್ಕೆ ಕಂಗಾಲಾದ ಪತ್ನಿ ನಂತರ ಕಾರಾಗೃಹದ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ.
ವಿಷಯ ತಿಳಿದು ಇತರೆ ಸಿಬ್ಬಂದಿ ವಸತಿಗೃಹಕ್ಕೆ ತೆರಳಿ ನೋಡುವಷ್ಟರಲ್ಲಿ ಅಸ್ಪಾಕ್ ತಗಡಿ ಕೊನೆಯುಸಿರು ಎಳೆದಿದ್ದಾನೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ