ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ವೀಡಿಯೋ ಕರೆ ಮಾಡಿ, ಶಿವಮೊಗ್ಗ ಜೈಲು ವಾಡ೯ನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ವಸತಿ ಗೃಹದಲ್ಲಿ ನಡೆದಿದೆ.
ಕೇಂದ್ರ ಕಾರಾಗೃಹದ ವಾರ್ಡನ್ ಅಸ್ಪಾಕ್ ತಗಡಿ (24) ಆತ್ಮಹತ್ಯೆ ಮಾಡಿಕೊಂಡವರು.
ಅಸ್ಪಾಕ್ ತಗಡಿ ಮೂಲತಃ ಬೆಳಗಾವಿ ಜಿಲ್ಲೆ ಹುಕ್ಕೇರಿ ನಿವಾಸಿ. ಕಳೆದ ಎರಡೂವರೆ ವರ್ಷದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಾರ್ಡನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿದ್ದ ಅಸ್ಪಾಕ್ ತಗಡಿಗೆ ಒಂದೂವರೆ ತಿಂಗಳ ಮಗುವಿದ್ದು, ಪತ್ನಿ ಬಾಣಂತನಕ್ಕೆ ತವರು ಮನೆಗೆ ತೆರಳಿದ್ದರು.
ವಿವಾಹವಾದ ಎರಡು ಮೂರು ತಿಂಗಳ ನಂತರದಿಂದಲೇ ಸಣ್ಣ ಪುಟ್ಟ ವಿಷಯಕ್ಕೆ ಪತಿ ಪತ್ನಿ ಇಬ್ಬರು ಜಗಳ ಆಡುತ್ತಿದ್ದರು ಎನ್ನಲಾಗಿದೆ.
ಬುಧವಾರ ರಾತ್ರಿ ಸಹ ಪತ್ನಿಗೆ ವೀಡಿಯೋ ಕರೆ ಮಾಡಿದ್ದ ಅಸ್ಪಾಕ್ ತಗಡಿ ಈ ವೇಳೆಯೂ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಅಲ್ಲದೇ ಅತ್ತೆ ಮಾವನೊಂದಿಗೂ ಸಹ ಜಗಳವಾಡಿದ್ದಾನೆ ಎನ್ನಲಾಗಿದೆ.
ಜಗಳ ಆಡುತ್ತಿರುವಾಗಲೇ ನೇಣು ಹಾಕಿಕೊಳ್ಳುವ ದೃಶ್ಯವನ್ನು ಪತ್ನಿಗೆ ತೋರಿಸಿದ್ದಾನೆ. ಪತಿಯ ಆತ್ಮಹತ್ಯೆ ನಿರ್ಧಾರಕ್ಕೆ ಕಂಗಾಲಾದ ಪತ್ನಿ ನಂತರ ಕಾರಾಗೃಹದ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ.
ವಿಷಯ ತಿಳಿದು ಇತರೆ ಸಿಬ್ಬಂದಿ ವಸತಿಗೃಹಕ್ಕೆ ತೆರಳಿ ನೋಡುವಷ್ಟರಲ್ಲಿ ಅಸ್ಪಾಕ್ ತಗಡಿ ಕೊನೆಯುಸಿರು ಎಳೆದಿದ್ದಾನೆ.
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
This website uses cookies.
Leave a Comment