ಡಿ ಆರ್ ಡಿಓ ಮಾಜಿ ವಿಜ್ಞಾನಿ, ಎಚ್ ಎ ಎಲ್ ನ ಹಿರಿಯ ನಿವೃತ್ತ ಎಂಜಿನಿಯರ್ ಹಾಗೂ ಸುಧೀಂದ್ರ ಹಾಲ್ದೊಡ್ಡೇರಿ ಅನೇಕ ಪತ್ರಿಕೆಗಳಿಗೆ ವಿಜ್ಞಾನ ಬರಹಗಳನ್ನು ಬರೆಯುತ್ತಿದ್ದರು. ಸುಪ್ರಸಿದ್ಧ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಶುಕ್ರವಾರ ಕೊನೆಯುಸಿರೆಳೆದರು.
ಕಳೆದ ಹತ್ತು ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿದ್ದ ಸುಧೀಂದ್ರ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು. ಮೆದುಳು ನಿಷ್ಕ್ರಿಯಗೊಂಡು ಈಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ಅವರ ದೇಹದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಇದರಂತೆ ಬೆಂಗಳೂರು ಮೆಡಿಕಲ್ ಕಾಲೇಜಿಗೆ ಅಂಗಾಂಗ ದಾನ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ನಾಗೇಶ್ ರಾವ್ ಅವರ ಪುತ್ರರಾಗಿರುವ ಸುಧೀಂದ್ರ ಪತ್ನಿ, ಇಬ್ಬರು ಹೆಣ್ಣು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್