ಆಂಧ್ರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೇ 9 ರಂದು ಎಲೂರಿನ ಥಿಯೇಟರ್ನಲ್ಲಿ ನಟ ಯಶ್ ನಟನೆಯ ಕೆಜಿಎಫ್ ಚಿತ್ರ ವೀಕ್ಷಿಸಲು ಬಂದಿದ್ದ ಅಭಿಮಾನಿಯೊಬ್ಬನು ಚಿತ್ರವನ್ನು ನೋಡುತ್ತಲೇ ಸಾವನ್ನಪ್ಪಿದ್ದಾನೆ.
ಈ ಸುದ್ದಿಯನ್ನು ತಿಳಿದು ಪೊಲೀಸರು ಕೂಡಲೇ ಚಿತ್ರಮಂದಿರಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಏಲೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ತನಿಖೆ ನಡೆಯುತ್ತಿರುವುದರಿಂದ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ.
ಏತನ್ಮಧ್ಯೆ, ಯಶ್,ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಮತ್ತು ಪ್ರಕಾಶ್ ರಾಜ್ ನಟಿಸಿರುವ ಕೆಜಿಎಫ್ 2 ಹಿಂದಿ ಬಾಕ್ಸ್ ಆಫೀಸ್ನಲ್ಲಿ ಇಂದಿಗೂ ಕೂಡ ಹಿಂದಿ ಚಿತ್ರಗಳ ಪ್ರಭಾವದ ನಡುವೆಯೂ ಇನ್ನೂ ಅಬ್ಬರಿಸುತ್ತಿದೆ.ಈಗಾಗಲೇ ಹಿಂದಿಯಲ್ಲಿ ಈ ಚಿತ್ರವು 415.30 ಕೋಟಿ ರೂ.ಗಳನ್ನು ಗಳಿಸಿದ್ದು, ಈ ವಾರದ ಅಂತ್ಯಕ್ಕೆ 420 ಕೋಟಿ ರೂ,ತಲುಪಲಿದೆ ಎನ್ನಲಾಗಿದೆ.
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ