Main News

2020 ಕ್ಕೆ ವಿದಾಯ: ಹೊಸ ವರ್ಷಾಚರಣೆಗೆ ಬ್ರೇಕ್-ಕಠಿಣ ರೂಲ್ಸ್ ‌ಜಾರಿ

2020 ಕ್ಕೆ ಇಂದು ವಿದಾಯ ಹೇಳುವ ದಿನ. 2021ರ ವರ್ಷದ ಆಗಮನದ ಸಡಗರ-ಸಂಭ್ರಮದಿಂದ ಸ್ವಾಗತಿಸೋಣ ಅಂತಾ ಕಾದು ಕುಳಿತಿದ್ದ ಜನರ ಆಸೆಗೆ ಕೊರೋನಾ ಮಾಹಾಮಾರಿಗೆ ಹೆದರಿ ಸರ್ಕಾರ ಹಾಗೂ ಪೋಲಿಸರು ಕಠಿಣ ರೂಲ್ಸ್ ಜಾರಿಗೆ ತಣ್ಣೀರು ಎರಚಿದ್ದಾರೆ.

ಬೆಂಗಳೂರಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ ನಿಷೇದಾಜ್ಙೆ :

ಬೆಂಗಳೂರು ಪೋಲಿಸ್ ಆಯುಕ್ತ ಕಮಲ್ ಪಂಥ್ ಹೊಸ ಆದೇಶ ಹೊಡಿಸಿ ನಗರದಾದ್ಯಂತ ಇಂದು ಮಧ್ಯಾಹ್ನ 12 ಗಂಟೆಯಿಂದಲೇ 144 ನಿಷೇದಾಜ್ಙೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

  • ಬೆಂಗಳೂರಿನ ಜನ ಮಧ್ಯಾಹ್ನ ದಿಂದಲೇ ಮನೆಯಿಂದಲೇ ಹೊರಗೆ ಬರುವಂತಿಲ್ಲ.
  • ಬಂದ್ ಸ್ಥಿತಿ ನಿರ್ಮಾಣವಾಗಲಿದೆ.
  • ಡಿಜೆ ಪಾರ್ಟಿ , ಸಂಭ್ರಮದ ಪಾರ್ಟಿಗಳಿಲ್ಲ.

ಹೊರ ಜಿಲ್ಲೆಗಳಲ್ಲೂ ನಿಷೇಧ :

  • ಕಾವೇರಿ ನದಿ ತೀರದ ಹಲವು ರೆಸಾರ್ಟ್​ಗಳಲ್ಲಿ ಅನುಮತಿ ಪಡೆದು ಪ್ರತಿವರ್ಷ ಹೊಸ ವರ್ಷಾಚರಣೆ ನಡೆಯುತ್ತಿತ್ತು. ಆದರೆ ರೂಪಾಂತರ ಗೊಂಡು ರಾಜ್ಯಕ್ಕೆ ಪ್ರವೇಶ ನೀಡಿರುವ ಕೊರೊನಾ ವೈರಸ್ ನಿಯಂತ್ರಣದ ಉದ್ದೇಶದಿಂದ ಈ ವರ್ಷ ಸಂಭ್ರಮಾಚರಣೆಗೆ ರಾಜ್ಯದ ಬಹುತೇಕ ‌ಪ್ರವಾಸಿ‌ ತಾಣಗಳಿಗೆ ನಿಷೇಧ ಹೇರಲಾಗಿದೆ.
  • ಮಂಡ್ಯ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ, ಶ್ರೀರಂಗಪಟ್ಟಣದ ಕೆಆರ್​ಎಸ್ ಹಿನ್ನೀರು, ಕಾವೇರಿ ನದಿಯ ಬಲಮುರಿ ಎಡ ಮುರಿಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇಂದು ಮತ್ತು ನಾಳೆ ಎರಡು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
  • ರಾಮನಗರ ಜಿಲ್ಲಾಡಳಿತ ಹೊಸ ವರ್ಷದ ಆಚರಣೆಗೆ ಬ್ರೇಕ್ ಹಾಕಿ ಕೊರೊನಾ ಹೆಚ್ಚಾಗದಂತೆ ತಡೆಯಲು ಕಟ್ಟುನಿಟ್ಟಿನ ‌ನಿಯಮಗಳನ್ನು ಜಾರಿಗೆ ತಂದಿದೆ. ಡಿ 30 ರಿಂದಲೇ ಜನವರಿ 2 ರವರೆಗೂ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲೆಯ ಕಣ್ವ ಜಲಾಶಯ, ಮಂಚನಬೆಲೆ ಜಲಾಶಯ, ಸಾವನದುರ್ಗ, ಸಂಗಮ, ಮೇಕೆದಾಟು, ಚುಂಚಿ ಫಾಲ್ಸ್​ನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ. ಜೊತೆಗೆ ಸಾಮೂಹಿಕ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದೆ.
  • ತುಮಕೂರು ಜಿಲ್ಲೆಯ ಪ್ರವಾಸಿ ತಾಣಗಳಲ್ಲೂ ಸಂಭ್ರಮಾಚರಣೆಗೆ ತುಮಕೂರು ಜಿಲ್ಲಾಡಳಿತ ತಡೆಯೊಡ್ಡಿದೆ. ಪ್ರಸಿದ್ಧ ಪ್ರವಾಸಿ ತಾಣ ದೇವರಾಯನ ದುರ್ಗ ಹಾಗೂ ನಾಮದಚಿಲುಮೆ ಪ್ರವೇಶಕ್ಕೆ ಇಂದು ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ನಿಷೇಧ ಹೆರಲಾಗಿದೆ.
  • ನಂದಿ ಬೆಟ್ಟದಲ್ಲಿ ಪಾರ್ಟಿ ಪ್ಲ್ಯಾನ್ ಮಾಡಿದ್ರೆ ಕ್ಯಾನ್ಸಲ್ ಮಾಡಿ! ಏಕೆಂದರೆ
    ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಂದಿ ಬೆಟ್ಟ ಪ್ರವೇಶಕ್ಕೆ ತಡೆ ನೀಡಿ ನಿಷೇಧ ಹೇರಿದೆ.
  • ಬೆಂಗಳೂರಿಗರು ನ್ಯೂ ಇಯರ್ ಸೆಲಬ್ರೇಟ್ ಮಾಡಲು ಸಜ್ಜಾಗಿದ್ದ ಎಂಜಿ ರೋಡ್​, ಬ್ರಿಗೇಡ್ ರಸ್ತೆಗಳಲ್ಲಿನ ಸಂಚಾರವನ್ನು ಮುಚ್ವಲಾಗುವುದು.
    ಈಗಾಗಲೇ ಹೋಟೆಲ್, ರೆಸ್ಟೋರೆಂಟ್, ಡಾಬಾ, ರೆಸಾರ್ಟ್​ಗಳ ಮಾಲೀಕರ ಸಭೆ ನಡೆಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

*/ಕರಾವಳಿಯ ಕಡಲ ತೀರಗಳಲ್ಲಿ ಸಂಭ್ರಮಾಚರಣೆಗೆ ನಿಷೇಧವಿದೆ
ಹೊಸ ವರ್ಷವನ್ನ ಕಡಲ ತೀರದಲ್ಲಿ ಆಚರಿಸೋರಿಗೇನೂ ಕಡಿಮೆ ಇಲ್ಲ. ಈ ಬಾರಿ ರಾಜ್ಯದ ಕರಾವಳಿಯಲ್ಲೂ ನಿಷೇಧಾಜ್ಞೆ ಜಾರಿಯಾಗಿದೆ, ಬಹುತೇಕ ಕಡಲ ತೀರಗಳಲ್ಲಿ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.

  • ಉತ್ತರಕನ್ನಡ ಜಿಲ್ಲೆಯ ಮುರ್ಡೇಶ್ವರ, ಹೊನ್ನಾವರ, ಗೋಕರ್ಣ ಮತ್ತು ಕಾರವಾರ ಬೀಚ್ ಸೇರಿ ಕರಾವಳಿ ಭಾಗದ 5 ತಾಲೂಕುಗಳಲ್ಲಿ ಸೆಕ್ಷನ್ 144 ಜಾರಿಮಾಡಿದೆ.
  • ಇಂದು ಸಂಜೆ ನಾಲ್ಕು ಗಂಟೆಯಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತೆ. ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ ಸೇರಿ ಎಲ್ಲಾ ಕಡಲ ತೀರದಲ್ಲಿ ಇಂದು ಮಧ್ಯಾಹ್ನ 12 ರಿಂದ ಜನವರಿ 2ರ ಮಧ್ಯಾಹ್ನ 12ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಉಡುಪಿ ಜಿಲ್ಲೆಯಲ್ಲೂ ಸಹ ಬೀಚ್​ಗಳ ಜೊತೆಗೆ ಬಾರ್, ಕ್ಲಬ್, ಪಬ್, ಬೀಚ್ ರೆಸಾರ್ಟ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ ನಡೆಸಬಾರದು ಅಂತಾ ರಾಜ್ಯ ಸರ್ಕಾರ ಆದೇಶಿಸಿದೆ.
  • ಹೊಸವರ್ಷವನ್ನು ತಮ್ಮ ತಮ್ಮ ಮನೆಯಲ್ಲೇ ಹೊಸ ವರ್ಷ ಆಚರಣೆ ಮಾಡವುದು ಸೂಕ್ತ ಏಕೆಂದರೆ ಈ ವರ್ಷ ಇಲ್ಲದಿದ್ದರೆ ಮುಂದಿನ ವರ್ಷ ಆಚರಣೆ ಮಾಡಬಹುದು ಅಲ್ಲವೇ?
Team Newsnap
Leave a Comment
Share
Published by
Team Newsnap

Recent Posts

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024