ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ರೈತರ ಪ್ರತಿಭಟನೆಯ ವೇಳೆ ಹಿಂಸಾಚಾರ ನಡೆಯಬಾರದಿತ್ತು, ಪ್ರಧಾನಿ, ರಾಷ್ಟ್ರಪತಿ ಇರುವ ಜಾಗದಲ್ಲಿ ಪೊಲೀಸರು ಮತ್ತು ರೈತರು ಇಬ್ಬರಿಗೂ ನೋವಾಗಿದೆ ಎಂದು ಶಾಸಕ ಸಾ.ರಾ.ಮಹೇಶ್ ಬೇಸರ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ದಿನಗಳಿಂದ ಹೋರಾಟ ಮಾಡುತ್ತಿರುವ ಕೆಲವು ರೈತರು ನಿನ್ನೆ ತಮ್ಮ ವ್ಯಾಪ್ತಿಯನ್ನು ಮೀರಿದ್ದಾರೆ. ಇದು ಪೊಲೀಸರ ವೈಫಲ್ಯ ಅಥವಾ ರೈತರ ದುಡುಕು ನಿರ್ಧಾರ ಅಂತಲೂ ಹೇಳಬಹುದು ಎಂದರು.
ಹೋರಾಟದ ಸಂದರ್ಭದಲ್ಲೂ ಪ್ರತಿಭಟನಾಕಾರರು ಸರ್ಕಾರದ ಆಸ್ತಿ ನಮ್ಮದು ಎಂಬುದನ್ನು ರೈತರು ಗಮನದಲ್ಲಿರಿಸಬೇಕಿತ್ತು. ಈ ಘಟನೆಯು ನಿಜಕ್ಕೂ ಖಂಡನೀಯ. ತನಿಖೆಯಿಂದ ಸತ್ಯ ಹೊರಬರಬೇಕು ಎಂದು ಒತ್ತಾಯಿಸಿದರು.
ಪಾಲಿಕೆ ಮೈತ್ರಿ ವಿಚಾರದಲ್ಲಿ ತಟಸ್ಥವಾಗಿದ್ದೇವೆ. ಮೈತ್ರಿ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಮೀಸಲಾತಿ ಪ್ರಕಟವಾಗುವವರೆಗೂ ನಾವು ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದರು.
ಕಾಂಗ್ರೆಸ್ನ ನಗರ ಪಾಲಿಕೆ ಸದಸ್ಯರು, ಮಾಜಿ ಮಹಾಪೌರರು ನಡೆದುಕೊಂಡ ರೀತಿ ನಮ್ಮ ಗಮನಕ್ಕೆ ಬಂದಿದೆ. ಆದರೆ, ಇತರೆ ಕಾಂಗ್ರೆಸ್ ನಾಯಕರ ಜೊತೆ ನಮ್ಮ ಸಂಬಂಧ ಚನ್ನಾಗಿದೆ.
ಕೆಲವರ ನಡವಳಿಕೆಯಿಂದ ಪಕ್ಷವನ್ನು ದೂರೋಕೆ ಸಾಧ್ಯವಿಲ್ಲ. ಆದರೆ ಮೀಸಲಾತಿ ಪ್ರಕಟವಾದ ನಂತರ ನಮ್ಮ ಸದಸ್ಯರ ತೀರ್ಮಾನದಂತೆ ನಡೆದುಕೊಳ್ಳುತ್ತೇವೆ. ಎರಡು ಪಕ್ಷಗಳು ರಾಜಕೀಯವಾಗಿ ನಮ್ಮ ವಿರೋಧಿಗಳೇ, ಆದ್ದರಿಂದ ತಟಸ್ಥವಾಗಿ ಇರುತ್ತೇವೆ ಎಂದು ಅಭಿಪ್ರಾಯ ತಿಳಿಸಿದರು.
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
This website uses cookies.
Leave a Comment