ಪ್ರೇಮ ವಿವಾಹ ಮಾಡಿಕೊಂಡ ಮಗಳು ಮನೆತನದ ಗೌರವವನ್ನು ಬೀದಿಗೆ ತಂದಳೆಂದು ಮನನೊಂದ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಕೆ.ಆರ್.ಪೇಟೆಯ ಬಿ. ಬಾಚಹಳ್ಳಿಯಲ್ಲಿ ಬುಧವಾರ ಜರುಗಿದೆ.
ಬಿ.ಬಾಚಹಳ್ಳಿ ಗ್ರಾಮದ ಪ್ರಗತಿಪರ ರೈತ ರವಿ ಆತ್ಮಹತ್ಯೆ ಮಾಡಿಕೊಂಡವರು, ಮಗಳು ಕೀರ್ತನಾ ಕಾಲೇಜಿನಲ್ಲಿ ಓದುವಾಗಲೇ ಅಭಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಮನೆಯಲ್ಲಿ ಕೀರ್ತನಾಳ ಪ್ರೇಮ ವಿವಾಹಕ್ಕೆ ಒಪ್ಪಿರಲಿಲ್ಲ ಈ ಕಾರಣಕ್ಕಾಗಿ ಮುನಿಸಿಕೊಂಡ ಕೀರ್ತಿನಾ ಮನೆ ಬಿಟ್ಟು ಅಭಿ ಜೊತೆ ಮದುವೆ ಮಾಡಿಕೊಂಡಿದ್ದಳು.
ಆಕೆಯ ಈ ನಿರ್ದಾರದಿಂದ ಮನೆ ಗೌರವ ಹಾಳಾಯಿತು ಎಂದು ರವಿ ಕುಟುಂಬದವರು ನೊಂದು ಕೊಂಡರು. ಮನೆ ಬಿಟ್ಟು ಹೋದ ತಮ್ಮ ಮಗಳನ್ನು ಹುಡುಕಿಕೊಡುವಂತೆ ಕೆ.ಆರ್.ಪೇಟೆ ಪೋಲಿಸರಿಗೆ ರವಿ ದೂರು ನೀಡಿದ್ದರು. ಐದು ದಿನವಾದರೂ ಮಗಳ ಬಗ್ಗೆ ಯಾವುದೇ ಸುಳಿವು ಸಿಗಲಿಲ್ಲ. ಪೋಲಿಸರು ಕೂಡ ಕೀರ್ತನಾ ಇರುವಿಕೆ ಬಗ್ಗೆ ಮಾಹಿತಿ ಸುಳಿವು ನೀಡಲಿಲ್ಲ ಮನನೊಂದ ರವಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಹಾಸ್ಟೆಲ್ನ ಕಿಟಕಿ ರಾಡ್ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ!
ಕೀರ್ತನಾಳನ್ನು ಹುಡುಕಿಕೊಡದ ಪೋಲಿಸರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ಬೇಸತ್ತ ರವಿ ಮೃತಪಟ್ಟಿದ್ದಾನೆ ಎಂದು ಸಂಬಂಧಿಕರು ಪೋಲಿಸ್ ಸ್ಟೇಷನ್ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದರು,ನಂತರ ಕೀರ್ತಳನ್ನು ಕೂಡಲೆ ಹುಡುಕಿ ತರುವುದಾಗಿ ಪೋಲಿಸರು ಭರವಸೆ ನೀಡಿದ ಮೇಲೆ ಪ್ರತಿಭಟನೆ ವಾಪಾಸು ಪಡೆಯಲಾಯಿತು.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ