ಪ್ರೇಮ ವಿವಾಹ ಮಾಡಿಕೊಂಡ ಮಗಳು ಮನೆತನದ ಗೌರವವನ್ನು ಬೀದಿಗೆ ತಂದಳೆಂದು ಮನನೊಂದ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಕೆ.ಆರ್.ಪೇಟೆಯ ಬಿ. ಬಾಚಹಳ್ಳಿಯಲ್ಲಿ ಬುಧವಾರ ಜರುಗಿದೆ.
ಬಿ.ಬಾಚಹಳ್ಳಿ ಗ್ರಾಮದ ಪ್ರಗತಿಪರ ರೈತ ರವಿ ಆತ್ಮಹತ್ಯೆ ಮಾಡಿಕೊಂಡವರು, ಮಗಳು ಕೀರ್ತನಾ ಕಾಲೇಜಿನಲ್ಲಿ ಓದುವಾಗಲೇ ಅಭಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಮನೆಯಲ್ಲಿ ಕೀರ್ತನಾಳ ಪ್ರೇಮ ವಿವಾಹಕ್ಕೆ ಒಪ್ಪಿರಲಿಲ್ಲ ಈ ಕಾರಣಕ್ಕಾಗಿ ಮುನಿಸಿಕೊಂಡ ಕೀರ್ತಿನಾ ಮನೆ ಬಿಟ್ಟು ಅಭಿ ಜೊತೆ ಮದುವೆ ಮಾಡಿಕೊಂಡಿದ್ದಳು.
ಆಕೆಯ ಈ ನಿರ್ದಾರದಿಂದ ಮನೆ ಗೌರವ ಹಾಳಾಯಿತು ಎಂದು ರವಿ ಕುಟುಂಬದವರು ನೊಂದು ಕೊಂಡರು. ಮನೆ ಬಿಟ್ಟು ಹೋದ ತಮ್ಮ ಮಗಳನ್ನು ಹುಡುಕಿಕೊಡುವಂತೆ ಕೆ.ಆರ್.ಪೇಟೆ ಪೋಲಿಸರಿಗೆ ರವಿ ದೂರು ನೀಡಿದ್ದರು. ಐದು ದಿನವಾದರೂ ಮಗಳ ಬಗ್ಗೆ ಯಾವುದೇ ಸುಳಿವು ಸಿಗಲಿಲ್ಲ. ಪೋಲಿಸರು ಕೂಡ ಕೀರ್ತನಾ ಇರುವಿಕೆ ಬಗ್ಗೆ ಮಾಹಿತಿ ಸುಳಿವು ನೀಡಲಿಲ್ಲ ಮನನೊಂದ ರವಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಹಾಸ್ಟೆಲ್ನ ಕಿಟಕಿ ರಾಡ್ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ!
ಕೀರ್ತನಾಳನ್ನು ಹುಡುಕಿಕೊಡದ ಪೋಲಿಸರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ಬೇಸತ್ತ ರವಿ ಮೃತಪಟ್ಟಿದ್ದಾನೆ ಎಂದು ಸಂಬಂಧಿಕರು ಪೋಲಿಸ್ ಸ್ಟೇಷನ್ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದರು,ನಂತರ ಕೀರ್ತಳನ್ನು ಕೂಡಲೆ ಹುಡುಕಿ ತರುವುದಾಗಿ ಪೋಲಿಸರು ಭರವಸೆ ನೀಡಿದ ಮೇಲೆ ಪ್ರತಿಭಟನೆ ವಾಪಾಸು ಪಡೆಯಲಾಯಿತು.
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ