ಎಪಿಎಂಸಿ ಕಾಯ್ದೆ ರೈತರಿಗೆ ಉಪಕಾರಿಯಾಗಿದೆ. ಕರ್ನಾಟಕದಲ್ಲಿ 162 ಎಪಿಎಂಸಿಗಳಿವೆ. ಇವುಗಳೂ ಸೇರಿದಂತೆ ರೈತರು ರಾಜ್ಯದ ಯಾವುದೇ ಭಾಗದಲ್ಲಿ ಬೇಕಾದರೂ ಸಹ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದು. ಆದರೆ, ವಿರೋಧಪಕ್ಷದವರಿಂದ ಜನರ ದಾರಿ ತಪ್ಪಿಸುವ ಕೆಲಸವಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಬುಧವಾರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್
ಈ ಕಾಯ್ದೆಯಿಂದ ಎಪಿಎಂಸಿಗೆ ಯಾವುದೇ ಧಕ್ಕೆ ಇಲ್ಲ. ಮೊದಲು 1 ರೂ. ಸೆಸ್ ನಿಗದಿ ಮಾಡಿದ್ದೆವು. ಕೊನೆಗೂ ದರವೂ ಹೆಚ್ಚಾಯಿತು ಎಂಬ ಮನವಿಗಳು ಬಂದ ಹಿನ್ನೆಲೆಯಲ್ಲಿ ನಾವು ಸಂಪುಟದಲ್ಲಿ ಚರ್ಚೆ ನಡೆಸಿ 35 ಪೈಸೆಗೆ ನಿಗದಿ ಮಾಡಿದೆವು. ಇಷ್ಟಾದರೂ ಎಪಿಎಂಸಿಗೆ ವರ್ಷಕ್ಕೆ 120 ಕೋಟಿ ರೂ. ಆದಾಯ ಬರುತ್ತದೆ. ಇದರಿಂದ ವ್ಯವಸ್ಥೆ ಮೇಲೆ ಯಾವುದೇ ಪರಿಣಾಮ ಬೀರದು. ಅಲ್ಲದೆ, ಎಪಿಎಂಸಿಯ ಅಧಿಕಾರ ಮೊಟುಕುಗೊಳ್ಳುವುದಿಲ್ಲ, ಇದನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದರು.
ಕೇಂದ್ರ ಸರ್ಕಾರ ಜಾರಿಗೆ ತಂದ ಕಾಯ್ದೆಯನ್ನು ಸಚಿವನಾಗಿ ನಾನು ಸ್ವಾಗತಿಸುತ್ತೇನೆ. ಇದು ರೈತರಿಗೆ ಅನುಕೂಲವಾಗುವ ಕಾನೂನೇ ವಿನಃ ಯಾವುದೇ ತೊಂದರೆಯಾಗದು ಎಂದು ಸ್ಪಷ್ಟಪಡಿಸಿದರು.
ಈ ಕಾಯ್ದೆ ಬರುವುದಕ್ಕೆ ಮುಂಚೆ 50ಕ್ಕೂ ಹೆಚ್ಚು ಮಲ್ಟಿ ನ್ಯಾಷನಲ್ ಕಂಪನಿಗಳಿಗೆ ಮಾರಾಟ ಮಾಡುವ ಅವಕಾಶವನ್ನು ಈ ಹಿಂದಿನ ಸರ್ಕಾರವೇ ಅನುಮತಿ ಕೊಟ್ಟಿತ್ತು. ಆದರೆ, ಅದರಿಂದಲೂ ರೈತರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಈಗಿನ ನೂತನ ಕಾಯ್ದೆಯಿಂದ ಪೈಪೋಟಿ ಏರ್ಪಟ್ಟು ರೈತರಿಗೇ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.
ಸ್ಥಳೀಯ ಎಪಿಎಂಸಿಗೆ ಅಧಿಕಾರ ಇಲ್ಲದಿದ್ದರೂ ರಾಜ್ಯ ಎಪಿಎಂಸಿ ಬೋರ್ಡ್ ಗೆ ಸಂಪೂರ್ಣ ಅಧಿಕಾರ ಇದೆ. ಹೀಗಾಗಿ ಮಲ್ಟಿ ನ್ಯಾಷನಲ್ ಕಂಪನಿಗಳು ಅಕ್ರಮ ಎಸಗುತ್ತಿದ್ದರೆ, ಹಣವನ್ನು ರೈತರಿಗೆ ಸರಿಯಾಗಿ ನೀಡದಿದ್ದಾಗ ರೈತರು ದೂರು ಕೊಟ್ಟರೆ ಅಂಥವರ ಪರವಾನಗಿಯನ್ನೇ ರದ್ದುಪಡಿಸುತ್ತೇವೆ ಎಂದು ತಿಳಿಸಿದರು.
ರೈತರ ಪ್ರತಿಭಟನೆ ಬಗ್ಗೆ ಸರ್ಕಾರ ಸಹ ಗಮನಹರಿಸುತ್ತಿದೆ. ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಕೊಡುವಂತೆ ಮುಖ್ಯಮಂತ್ರಿಗಳು ಸಹ ತಿಳಿಸಿದ್ದಾರೆ. ಹೀಗಾಗಿ ನಾನೂ ಸಹ ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment