Editorial

ಮತ್ತೆ ಸುದ್ದಿಯಲ್ಲಿ ಪ್ರಾಮುಖ್ಯತೆ ಪಡೆದ ರೈತರ ಆತ್ಮಹತ್ಯೆ

ಕರ್ನಾಟಕ ದೇಶದಲ್ಲಿ ಎರಡನೆಯ ಸ್ಥಾನ ಎಂಬ ಮಾಹಿತಿ.

ಅನ್ನ ತಿನ್ನುವವರ ಬೇಜವಾಬ್ದಾರಿ…..

ಈಗಲಾದರೂ ನಾವುಗಳು ಒಂದಷ್ಟು ಜವಾಬ್ದಾರಿ ವಹಿಸಿಕೊಳ್ಳೋಣ…

ನಾವು ಸಾಮಾನ್ಯರು, ಆಡಳಿತಗಾರರಲ್ಲ, ಅಧಿಕಾರಿಗಳಲ್ಲ, ಪತ್ರಕರ್ತರಲ್ಲ, ಸ್ವಾಮೀಜಿಗಳಲ್ಲ ರೊಟ್ಟಿ ತಿನ್ನುವ ಋಣಭಾರದವರು.

ಹಾಗಾದರೆ ನಾವು ಏನು ಮಾಡಬಹುದು.

ಸಾಮಾನ್ಯವಾಗಿ ರೈತರ ಆತ್ಮಹತ್ಯೆ ಸಂಭವಿಸುವುದು ಗ್ರಾಮೀಣ ಭಾಗದಲ್ಲಿಯೇ ಹೆಚ್ಚು.

ಮುಖ್ಯವಾಗಿ ಹಣಕಾಸಿನ ತೊಂದರೆ ಮತ್ತು ಅದರಿಂದ ಆಗಬಹುದಾದ ಮಾನಹಾನಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚು.

ಇದನ್ನು ಗಮನದಲ್ಲಿಟ್ಟುಕೊಂಡು…..

1) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಇರುವವರು ಮತ್ತು ಸಾಮಾಜಿಕ ತುಡಿತ ಇರುವ ಕೆಲವು ಶಿಕ್ಷಕರು, ಪೋಲೀಸರು, ವೈದ್ಯರು, ಗ್ರಾಮ ಪಂಚಾಯತಿ ಸದಸ್ಯರು, ಪಶು ವೈದ್ಯರು, ಹೋರಾಟಗಾರರು ಮುಂತಾದವರು ಕನಿಷ್ಠ ಹದಿನೈದು ದಿನಗಳಿಗೆ ಒಮ್ಮೆ ಸಭೆ ಸೇರಿ ಒಂದು ಗಂಟೆ ಸಂವಾದ ಚರ್ಚೆ ನಡೆಸಿ ಉಳಿದ ಸುಮಾರು 6 ಗಂಟೆಗಳ ಸಮಯವನ್ನು ಯಾವುದಾದರೂ ಒಂದು ಹಳ್ಳಿಗೆ ಹೋಗಿ ರೈತರನ್ನು ಕುಟುಂಬ ಸಮೇತ ಸೇರಿಸಿ ಆತ್ಮಹತ್ಯೆಯ ಬಗ್ಗೆಯೇ ಒಂದು ಮಾತುಕತೆ ನಡೆಸುವುದು. ಅದರಲ್ಲೂ ಸಾಲ ಇರುವ ಕುಟುಂಬದವರನ್ನು ಕಡ್ಡಾಯವಾಗಿ ಸೇರಿಸುವುದು.

2) ಅಲ್ಲಿ ಎಲ್ಲಿಂದಲೋ ಬಂದ ಯಾರೋ ಸಂಪನ್ಮೂಲ ವ್ಯಕ್ತಿ ಭಾಷಣ ಮಾಡಬಾರದು. ರೈತರನ್ನೇ ಈ ಕುರಿತು ಮಾತನಾಡಿಸಬೇಕು. ಸ್ಥಳೀಯ ವ್ಯಕ್ತಿಗಳಿಗೇ ಆದ್ಯತೆ ಕೊಡಬೇಕು.

3) ವಿಷಯ :
ಮಾನ ಮತ್ತು ಪ್ರಾಣ ಇದರಲ್ಲಿ ಯಾವುದು ಅತಿಮುಖ್ಯ….

ಆತ್ಮಹತ್ಯೆಯಿಂದ ಮುಂದೆ ಅವರ ಕುಟುಂಬದಲ್ಲಿ ಆಗಬಹುದಾದ ಪರಿಣಾಮಗಳು….

ಬದುಕು ಮತ್ತು ಸಾವಿನ ನಡುವಿನ ವ್ಯತ್ಯಾಸ….

ಪ್ರಕೃತಿಯ ಸಹಜ ನಿಯಮಗಳು….

4) ಇಲ್ಲಿ ಬುದ್ದಿಯ ಪ್ರದರ್ಶನ ಇರಬಾರದು. ಹೃದಯಗಳ ಸಂಭಾಷಣೆಯೇ ಮುಖ್ಯವಾಗಬೇಕು. ಮನಸ್ಸುಗಳಿಗೆ ನಾಟುವಂತೆ, ಮುಂದೆ ಎಂದಾದರೂ ಆತ್ಮಹತ್ಯೆಯ ಯೋಚನೆ ಬಂದಾಗ ಈ ಸಂವಾದ ಅವರಿಗೆ ನೆನಪಾಗಿ ತಮ್ಮ ಯೋಚನೆ ಬದುಕಿನ ಕಡೆಗೆ ಸಾಗುವಂತೆ ಮಾಡವಷ್ಟು ಪರಿಣಾಮವಾಗಿಸುವ ಪ್ರಯತ್ನ ಮಾಡಬೇಕು.

5) ಈ ಸಂವಾದ ಯಾವುದೇ ಸಂಘ ಸಂಸ್ಥೆ ಪಕ್ಷ ಜಾತಿ ಧರ್ಮ ಭಾಷೆ ಲಿಂಗ ಚಳವಳಿ ಮುಂತಾದ ಯಾವುದಕ್ಕೂ ಒಳಪಡದೆ ಎಲ್ಲರೂ ಸೇರಿ ಮಾನವೀಯ ಮೌಲ್ಯಗಳ ಹಿನ್ನೆಲೆಯ ವಿಶಾಲತೆ ಹೊಂದಿರಬೇಕು. ಇಲ್ಲದಿದ್ದರೆ ಗುಂಪುಗಾರಿಕೆಯ ಕಾರಣ ಉದ್ದೇಶ ವಿಫಲವಾಗಬಹುದು.

6) ಇಲ್ಲಿ ಸಂಯಮ ಅತಿಮುಖ್ಯ. ಯಾವುದೇ ನಿರೀಕ್ಷೆ, ಪ್ರತಿಫಲಾಪೇಕ್ಷೆ, ಸಾಧಿಸುವ ಛಲ, ಸೇವೆಯ ಅಹಂ ಯಾವುದೂ ಇರಬಾರದು. ಕೇವಲ ನಮ್ಮ ಕರ್ತವ್ಯ ಎಂದು ಮಾತ್ರ ಪರಿಗಣಿಸಿ ಮಾಡಬೇಕು. ಇನ್ನೊಬ್ಬರ ಒಳಗೊಳ್ಳುವಿಕೆ ಬೊಟ್ಟು ಮಾಡದೆ ನಮ್ಮ ಆತ್ಮಸಾಕ್ಷಿಯಂತೆ ನಡೆದುಕೊಳ್ಳಬೇಕು.

7) ಇನ್ನೊಂದು ಮುಖ್ಯ ವಿಷಯ. ಇಲ್ಲಿ ಯಾವುದೇ ರೀತಿಯ ಹಣಕಾಸಿನ ವ್ಯವಹಾರ ಇರಬಾರದು. ಇದು ಸಂಪೂರ್ಣ ಉಚಿತ ಸೇವೆ. ಊಟ ಕಾಫಿ ತಿಂಡಿಯ ವಿಷಯದಲ್ಲಿ ಒಂದು ಮಿತಿಯೊಳಗೆ ಪರಿಚಿತರ ಸಹಾಯ ಪಡೆಯಬಹುದು.

8) ಪ್ರಶಸ್ತಿ ಪ್ರಚಾರ ಸನ್ಮಾನಗಳ ಮೋಹವನ್ನು ಮೀರಿದ ವ್ಯಕ್ತಿತ್ವ ತುಂಬಾ ಅವಶ್ಯಕ.

ಕೊನೆಯದಾಗಿ,
ಇದು ಅವರವರ ವಿವೇಚನೆಗೆ ಬಿಟ್ಟದ್ದು. ಯಾವುದೇ ಒತ್ತಡ ಇರುವುದಿಲ್ಲ. ಅನ್ನದಾತನ ಜೀವ ಉಳಿಸುವ ಒಂದು ಸಾಧ್ಯತೆಗಾಗಿ ನಮ್ಮ ಅಳಿಲು ಸೇವೆ ಮಾತ್ರ. ಸಮಾಜದ ಋಣ ತೀರಿಸುವ ಒಂದು ಅವಕಾಶ ಎಂದೂ ಭಾವಿಸಬಹುದು.

ಇದನ್ನು ಪ್ರಾಯೋಗಿಕವಾಗಿ ತಮ್ಮ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮಾಡಲು ಇಚ್ಚಿಸುವವರು ಯಾವುದೇ ರೀತಿಯ ಮತ್ತಷ್ಟು ಸಲಹೆ ಬೇಕಿದ್ದರೆ ನಿಸ್ಸಂಕೋಚವಾಗಿ ನನ್ನ ಮೊಬೈಲ್ ನಂಬರಿಗೆ ಕಾಲ್ ಮಾಡಿ ಮತ್ತಷ್ಟು ಚರ್ಚೆ ನಡೆಸಬಹುದು ಅಥವಾ ಇದಕ್ಕಿಂತ ಉತ್ತಮ ಸಲಹೆ ಇದ್ದರೆ ಅದನ್ನು ಅನುಷ್ಠಾನ ಗೊಳಿಸಬಹುದು.

ಸುಮ್ಮನೆ ಗೊಣಗುತ್ತಾ ಇರುವ ಬದಲು ಪ್ರಯತ್ನ ಪಡುವುದು ಉತ್ತಮ…..

ಒಟ್ಟಿನಲ್ಲಿ ಒಂದಷ್ಟು ಜೀವ ಉಳಿಸಲು ನಮ್ಮ ಜವಾಬ್ದಾರಿ ನಿರ್ವಹಿಸೋಣ. ವ್ಯವಸ್ಥೆಯ ಸುಧಾರಣೆಯ ಮುಂದೆ………

ವಿವೇಕಾನಂದ ಹೆಚ್.ಕೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024