ಮಂಡ್ಯ: ವೆಂಕಟೇಶ್ ರವರು ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ ಸೆಂಟ್ರಲ್ ಪೋಲೀಸ್ ಠಾಣೆಗೆ ತಮ್ಮ ಮಗಳು ವರ್ಷಾ ರವರೇ ಮೊದಲ ಪೋಸ್ಟಿಂಗ್ ಆಗಿ ತಂದೆಯ ಸ್ಥಳಕ್ಕೆ ಬಂದ ಅಪರೂಪದ ಪ್ರಕರಣ ಮಂಡ್ಯದಲ್ಲಿ ಜರುಗಿದೆ.
ಈ ವಿಚಾರ ತಿಳಿದ ಕೂಡಲೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಯವರು ತಂದೆ – ಮಗಳಿಗೆ ದೂರವಾಣಿಯಲ್ಲಿ ಮಾತನಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಮಂಡ್ಯ ನಗರದ ಸೆಂಟ್ರಲ್ ಠಾಣೆಯಲ್ಲಿ ಪಿಎಸ್ಐ ಬಿ.ಎಸ್. ವೆಂಕಟೇಶ್ ರವರು ಮಂಡ್ಯ ಎಸ್ಪಿ ಕಛೇರಿಗೆ ವರ್ಗಾವಣೆಯಾಗಿದ್ದಾರೆ. ಅದೇ ಹುದ್ದೆಗೆ ಅವರ ಪುತ್ರಿ ಬಿ.ವಿ. ವರ್ಷಾ ನೇಮಕಗೊಂಡಿದ್ದಾರೆ.
ಪಿಎಸ್ಐ ಪರೀಕ್ಷೆಯಲ್ಲಿ ತೇರ್ಗಡೆಗೊಂಡು 2022 ರ ಬ್ಯಾಚ್ ನಲ್ಲಿ ಪಿಎಸ್ಐ ಆಗಿರುವ ವರ್ಷಾ ರವರು ಕಲಬುರುಗಿಯಲ್ಲಿ ತರಬೇತಿ ಮುಗಿಸಿ ಮಂಡ್ಯದಲ್ಲೇ ಒಂದು ವರ್ಷ ಪ್ರೋಬೆಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಈಗ ಪೋಸ್ಟಿಂಗ್ ಕೂಡ ಮಂಡ್ಯದಲ್ಲೇ ಆಗಿದೆ.ಅದೂ ಕೂಡ ತನ್ನ ತಂದೆ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಸೆಂಟ್ರಲ್ ಠಾಣೆಗೆ ಪಿಎಸ್ಐ ಆಗಿ ಪೋಸ್ಟಿಂಗ್ ಪಡೆದುಕೊಂಡಿರುತ್ತಾರೆ.ಯೋಗ , ಮಾನಸಿಕ – ದೈಹಿಕ ಆರೋಗ್ಯವೃದ್ಧಿಗೆ ಸಹಕಾರಿ : ಪ್ರತಾಪ್ ಸಿಂಹ
ತಂದೆಯಿಂದಲೇ ಪಿಎಸ್ಐ ಆಗಿ ಚಾರ್ಜ್ ಪಡೆದು ಪೋಲೀಸ್ ವೃತ್ತಿ ಜೀವನ ಪ್ರಾರಂಭಿಸಿರುವ ಅಪರೂಪದ ಪ್ರಕರಣ ಇದಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು