ಕಳೆದ ಬಾರಿ ಮುಂಗಾರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚಾಮುಂಡಿಬೆಟ್ಟದ ನಂದಿ ರಸ್ತೆ ಕುಸಿದಿತ್ತು. ಇದರ ದುರಸ್ತಿ ಕಾರ್ಯ ಈವರೆಗೂ ಆರಂಭವಾಗಿಲ್ಲ. ಈಗಾಗಲೇ ಮುಂಗಾರು ರಾಜ್ಯ ಪ್ರವೇಶಿಸಿದೆ. ಹೀಗಾಗಿ ಕುಸಿತ ಉಂಟಾದ ರಸ್ತೆ ಭಾಗ ಮತ್ತಷ್ಟು ಹಾನಿಗೀಡಾಗುವ ಆತಂಕ ಎದುರಾಗಿದೆ.
ಮಳೆಗಾಲ ಆರಂಭವಾಗಿರುವುದರಿಂದ ಭೂ ಕುಸಿತ ಉಂಟಾದ ಜಾಗದಲ್ಲಿ ಮತ್ತೆ ಭೂಮಿ ಬಿರುಕು ಬಿಟ್ಟು ಮಣ್ಣಿನ ಕುಸಿತವಾಗಬಹುದು. ಇದರಿಂದ ರಸ್ತೆ ದುರಸ್ತಿ ಮತ್ತಷ್ಟು ಜಟಿಲವಾಗುವ ಆತಂಕ ಎದುರಾಗಿದೆ.ಇದನ್ನು ಓದಿ –ಕೆ ಆರ್ ಪೇಟೆ ಈಶ್ವರನ ದೇವಸ್ಥಾನದಲ್ಲಿ ಶುದ್ದೀಕರಣ ಆರಂಭ – ನಾಳೆ ಪುನರ್ ಪ್ರತಿಷ್ಠಾಪನೆ
ಮತ್ತಷ್ಟು ಬಿರುಕು
ಕುಸಿತಗೊಂಡಿರುವ ರಸ್ತೆ ಸಮೀಪ ಮತ್ತಷ್ಟು ಕಡೆ ಬಿರುಕು ಕಾಣಿಸಿಕೊಂಡಿದೆ. ಈಗಾಗಲೇ ಎರಡು ಕಡೆ ಭಾರಿ ಪ್ರಮಾಣದ ಭೂ ಕುಸಿತವಾಗಿದೆ.

ಕುಸಿತಗೊಂಡಿರುವ ಜಾಗದಲ್ಲಿ ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳದ ಪರಿಣಾಮ ಭಾರಿ ಪ್ರಮಾಣದ ಮಣ್ಣು ಸವೆಯುತ್ತಿದೆ. ಇದರ ಜತೆಗೆ ಕುಸಿದ ಭಾಗದ ಸಮೀಪ ಎರಡು-ಮೂರು ಕಡೆ 50 ಮೀಟರ್ಗಳಷ್ಟು ಬಿರುಕು ಬಿಟ್ಟಿದೆ. ಇದು ಈ ಬಾರಿ ಸುರಿಯುವ ಮಳೆಯಲ್ಲಿ ಕುಸಿಯುವ ಎಲ್ಲಾ ಸಾಧ್ಯತೆ ಇದೆ, ಹೀಗಾಗಿ ಬೆಟ್ಟಕ್ಕೆ ಮತ್ತಷ್ಟು ಘಾಸಿಯಾಗುವ ಮುನ್ನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು