ಬೈಕ್ ಕಳ್ಳತನದ ಶಂಕೆ ಮೇಲೆ ಯುವಕನೊಬ್ಬನನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಪೊಲೀಸರ ಕರೆಗೆ ಹೆದರಿ ಮಗ ಆತ್ಮಹತ್ಯೆಗೆ ಶರಣಾದನು. ಇತ್ತ ಮಗನ ಸಾವಿನ ಸುದ್ದಿ ತಿಳಿದ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ಜರುಗಿದೆ.
ಮೋಹನ್ ಗೌಡ (18) ಹಾಗೂ ಈ ಯುವಕನ ಅಮ್ಮ ಲೀಲಾವತಿ ಆತ್ಮಹತ್ಯೆ ಮಾಡಿಕೊಂಡವರು.
ಬೈಕ್ ಕಳ್ಳತನ ಕೇಸ್ ಒಂದರ ಸಂಬಂಧ ವಿಜಯನಗರ ಪೊಲೀಸರು ವಿಚಾರಣೆಗಾಗಿ ಮೋಹನ್ ಗೌಡನನ್ನು ಕರೆದಿದ್ದರು. ಆದರೆ ಮಗ ಮೋಹನ್ ಗೌಡ ಪೊಲೀಸರ ಕೇಸು, ವಿಚಾರಣೆ ಅಂತಾ ಹೆದರಿ ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಮನೆಯಲ್ಲಿದ್ದವರು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.
ಮಗ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ತಿಳಿದ ತಾಯಿ ಲೀಲಾವತಿ ಕೂಡ ಆಸ್ಪತ್ರೆ ಬಳಿ ಓಡಾಡೋಡಿ ಬಂದಿದ್ದರು. ಆಸ್ಪತ್ರೆ ಒಳಗೆ ಹೋಗೋವಷ್ಟರಲ್ಲಿ ಮಗ ಮೋಹನ್ ಗೌಡ ಸಾವನ್ನಪ್ಪಿದ್ದಾನೆಂದು ವೈದ್ಯರು ಹೇಳಿದರು.
ಮಗ ಸಾವನ್ನಪ್ಪಿದ್ದಾನೆ ಅನ್ನೋ ವಿಚಾರವನ್ನು ತಿಳಿದ ತಾಯಿ ಲೀಲಾವತಿ, ತಕ್ಷಣ ಆಸ್ಪತ್ರೆಯಿಂದ ಹೊರ ಬಂದು ಅಲ್ಲೇ ಬರುತ್ತಿದ್ದ ಕಾರಿಗೆ ತಲೆಕೊಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಆಸ್ಪತ್ರೆ ಬಳಿ ಕುಟುಂಬಸ್ಥರು, ಸಾರ್ವಜನಿಕರ ಕಣ್ಣ ಮುಂದೆಯೇ ಈ ಘಟನೆ ನಡೆದಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment