ಭಾರತವು ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾವಸ್ತುಗಳನ್ನು ಬಹುತೇಕವಾಗಿ ಆಮದು ಮಾಡಿಕೊಳ್ಳುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ತೀವ್ರವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಸಗೊಬ್ಬರ ಉತ್ಪಾದನಾ ವೆಚ್ಚವೂ ಅದೇ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಎಲ್ಲ ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆ ಹೆಚ್ಚಿಸಿವೆ. ಆದಾಗ್ಯೂ, ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡುವಂತೆ ರಸಗೊಬ್ಬರ ಕಂಪನಿಗಳು ಹಾಗೂ ಆಮದುದಾರರ ಮನ ಒಲಿಸಲು ಕೇಂದ್ರ ಸರ್ಕಾರವು ತೀವ್ರ ಪ್ರಯತ್ನ ನಡೆಸಿದೆ.
ಸಾರ್ವಜನಿಕ ವಲಯದ ರಸಗೊಬ್ಬರ ಕಂಪನಿಗಳ ಹೊರತಾಗಿ ಸಹಕಾರಿ ವಲಯದ ಇಫ್ಕೋ ಕಂಪನಿಯು ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡಲು ಒಪ್ಪಿಕೊಂಡಿದ್ದು ಈಗಾಗಲೇ ತನ್ನ ನಿರ್ಧಾರವನ್ನು ಕಾರ್ಯಗತಗೊಳಿಸಿದೆ ಎಂದು ತಿಳಿಸಿದ್ದಾರೆ.
ಯಾವ ದಾಸ್ತಾನು ಏಷ್ಟಿದೆ ?
ಗೊಬ್ಬರಕ್ಕೂ ಸಬ್ಸಿಡಿ
ರೈತರಿಗೆ ಹೊರೆಯಾಗಬಾರದು ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರವು ರಸಗೊಬ್ಬರಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿ ನೀಡುತ್ತದೆ. ಇದಕ್ಕಾಗಿ ಪ್ರತಿವರ್ಷ ಸರಾಸರಿ ಏನಿಲ್ಲವೆಂದರೂ 75000 ಕೋಟಿ ರೂಪಾಯಿ ಒದಗಿಸುತ್ತದೆ.
ಪೋಷಕಾಂಶ ಆಧಾರಿತ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ‘ನೈಟ್ರೋಜನ್’ಗೆ ಟನ್ ಒಂದಕ್ಕೆ 18,789 ರೂ ಸಬ್ಸಿಡಿ ಒದಗಿಸಲಾಗುತ್ತಿದೆ. ಅದೇ ರೀತಿ ‘ಫೊಸ್ಫೇಟ್’ಗೆ (ಒಂದು ಟನ್ ಗೆ) 14,888 ರೂ, ‘ಪೊಟಾಷ್’ಗೆ 10,116 ರೂ ಹಾಗೂ ‘ಸಲ್ಫರ್’ಗೆ 2,374 ರೂ ಸಬ್ಸಿಡಿ ನೀಡುತ್ತಿದ್ದೇವೆ ಎಂದು ಸದಾನಂದ ಗೌಡ ವಿವರಿಸಿದ್ದಾರೆ.
ಯೂರಿಯಾ ಮತ್ತಿತರ ನಮೂನೆಯ ರಸಗೊಬ್ಬರಗಳ ಮಾರಾಟದಲ್ಲಿ ಶೇಕಡಾ 17ರಿಂದ ಶೇಕಡಾ 42ರಷ್ಟು ಹೆಚ್ಚಳ ಕಂಡುಬಂತು. ಇದರಿಂದ ರೈತರು ಬಂಪರ್ ಬೆಳೆ ಬೆಳೆಯಲು ಸಾಧ್ಯವಾಯಿತು. ಮುಂಬರುವ ಮುಂಗಾರು ಬೆಳೆ ಹಂಗಾಮಿನಲ್ಲಿಯೂ ರಸಗೊಬ್ಬರ ಸರಬರಾಜಿನಲ್ಲಿ ಸ್ವಲ್ಪವೂ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಕೃಷಿ ಇಲಾಖೆ ಈಗಾಗಲೇ ಮುಂಗಾರು ಹಂಗಾಮಿಗೆ ಎಷ್ಟು ರಸಗೊಬ್ಬರ ಬೇಕು ಎಂಬ ಬಗ್ಗೆ ಬೇಡಿಕೆ ಸಲ್ಲಿಸಿದೆ. ಇದಕ್ಕೆ ಅನುಗುಣವಾಗಿ ಸರಬರಾಜು ಮಾಡಲು ತಯಾರಿ ಆರಂಭಿಸಲಾಗಿದೆ. ಸೋಮವಾರದ ಸಭೆಯಲ್ಲಿಯೂ ಈ ವಿಷಯ ಮತ್ತೊಮ್ಮೆ ಚರ್ಚೆಯಾಗಲಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ