Categories: Main News

ರಸಗೊಬ್ಬರ ಬೆಲೆ ನಿಯಂತ್ರಣ: ನಾಳೆ ರಸಗೊಬ್ಬರ ಕಂಪನಿಗಳ ಜೊತೆ ಸಚಿವ ಸದಾನಂದ ಗೌಡ ಮಹತ್ವದ ಸಭೆ

  • ಮುಂಗಾರು ಬೆಳೆ ಹಂಗಾಮಿಗಾಗಿ ರಸಗೊಬ್ಬರ ಪೂರೈಕೆಗೆ ತಯಾರಿ ಮತ್ತು ಬೆಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ
    ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಸೋಮವಾರ ದೆಹಲಿಯಲ್ಲಿ ರಸಗೊಬ್ಬರ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಯೂರಿಯಾ ಹೊರತಾದ ವಿವಿಧ ನಮೂನೆಯ ಪೋಷಕಾಂಶ ರಸಗೊಬ್ಬರ ಬೆಲೆಗಳಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಚಿವರು ಕರೆದಿರುವ ಈ ಸಭೆಗೆ ಮಹತ್ವ ಬಂದಿದೆ.

ಭಾರತವು ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾವಸ್ತುಗಳನ್ನು ಬಹುತೇಕವಾಗಿ ಆಮದು ಮಾಡಿಕೊಳ್ಳುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ತೀವ್ರವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಸಗೊಬ್ಬರ ಉತ್ಪಾದನಾ ವೆಚ್ಚವೂ ಅದೇ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಎಲ್ಲ ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆ ಹೆಚ್ಚಿಸಿವೆ. ಆದಾಗ್ಯೂ, ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡುವಂತೆ ರಸಗೊಬ್ಬರ ಕಂಪನಿಗಳು ಹಾಗೂ ಆಮದುದಾರರ ಮನ ಒಲಿಸಲು ಕೇಂದ್ರ ಸರ್ಕಾರವು ತೀವ್ರ ಪ್ರಯತ್ನ ನಡೆಸಿದೆ.

ಸಾರ್ವಜನಿಕ ವಲಯದ ರಸಗೊಬ್ಬರ ಕಂಪನಿಗಳ ಹೊರತಾಗಿ ಸಹಕಾರಿ ವಲಯದ ಇಫ್ಕೋ ಕಂಪನಿಯು ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡಲು ಒಪ್ಪಿಕೊಂಡಿದ್ದು ಈಗಾಗಲೇ ತನ್ನ ನಿರ್ಧಾರವನ್ನು ಕಾರ್ಯಗತಗೊಳಿಸಿದೆ ಎಂದು ತಿಳಿಸಿದ್ದಾರೆ.

ಯಾವ ದಾಸ್ತಾನು ಏಷ್ಟಿದೆ ?

  • ದೇಶದಲ್ಲಿ ಹಳೆ ದಾಸ್ತಾನು ಸುಮಾರು ಒಂದುವರೆ ತಿಂಗಳಿಗೆ ಸಾಕಾಗುವಷ್ಟಿದೆ.
  • ಇಫ್ಕೋ ಬಳಿ 11.26 ಲಕ್ಷ ಟನ್ ಎನ್ಪಿಕೆ, ಡಿಏಪಿ ಮತ್ತಿತರ ನಮೂನೆಯ ಪೋಷಕಾಂಶಯುಕ್ತ ರಸಗೊಬ್ಬರಗಳ ಹಳೆ ದಾಸ್ತಾನು ಇದೆ.
  • ರಾಜ್ಯದಲ್ಲಿಯೇ1.22 ಲಕ್ಷ ಟನ್ ದಾಸ್ತಾನಿದೆ.
  • 50 ಕೆಜಿ ಡಿಎಪಿ ಮೂಟೆಯೊಂದಕ್ಕೆ 1200 ರೂಗೆ (ಹಳೆ ದರ) ಮಾರಾಟಮಾಡಲಾಗುತ್ತಿದೆ.
  • ‘ಎನ್ಪಿಕೆ-10-26-26’ ನಮೂನೆ ರಸಗೊಬ್ಬರ ಮೂಟೆಗೆ 1175 ರೂ, ‘ಎನ್ಪಿಕೆ-12-32-16’ಗೆ 1185 ರೂ, ‘ಎನ್ಪಿ-20-20.0.13’ಗೆ 925 ರೂ ಹಾಗೂ 15:15:15 ನಮೂನೆ ರಸಗೊಬ್ಬರಕ್ಕೆ 1025 ರೂ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ.
  • ಹಳೆದಾಸ್ತಾನು ಮುಗಿಯುವ ತನಕ ಹಳೆ ದರವೇ ಇರಲಿದ್ದು ರೈತರು ಇದರ ಉಪಯೋಗ ಪಡೆಯಬೇಕಿದೆ

ಗೊಬ್ಬರಕ್ಕೂ ಸಬ್ಸಿಡಿ

ರೈತರಿಗೆ ಹೊರೆಯಾಗಬಾರದು ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರವು ರಸಗೊಬ್ಬರಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿ ನೀಡುತ್ತದೆ. ಇದಕ್ಕಾಗಿ ಪ್ರತಿವರ್ಷ ಸರಾಸರಿ ಏನಿಲ್ಲವೆಂದರೂ 75000 ಕೋಟಿ ರೂಪಾಯಿ ಒದಗಿಸುತ್ತದೆ.

ಪೋಷಕಾಂಶ ಆಧಾರಿತ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ‘ನೈಟ್ರೋಜನ್’ಗೆ ಟನ್ ಒಂದಕ್ಕೆ 18,789 ರೂ ಸಬ್ಸಿಡಿ ಒದಗಿಸಲಾಗುತ್ತಿದೆ. ಅದೇ ರೀತಿ ‘ಫೊಸ್ಫೇಟ್’ಗೆ (ಒಂದು ಟನ್ ಗೆ) 14,888 ರೂ, ‘ಪೊಟಾಷ್’ಗೆ 10,116 ರೂ ಹಾಗೂ ‘ಸಲ್ಫರ್’ಗೆ 2,374 ರೂ ಸಬ್ಸಿಡಿ ನೀಡುತ್ತಿದ್ದೇವೆ ಎಂದು ಸದಾನಂದ ಗೌಡ ವಿವರಿಸಿದ್ದಾರೆ.

ಯೂರಿಯಾ ಮತ್ತಿತರ ನಮೂನೆಯ ರಸಗೊಬ್ಬರಗಳ ಮಾರಾಟದಲ್ಲಿ ಶೇಕಡಾ 17ರಿಂದ ಶೇಕಡಾ 42ರಷ್ಟು ಹೆಚ್ಚಳ ಕಂಡುಬಂತು. ಇದರಿಂದ ರೈತರು ಬಂಪರ್ ಬೆಳೆ ಬೆಳೆಯಲು ಸಾಧ್ಯವಾಯಿತು. ಮುಂಬರುವ ಮುಂಗಾರು ಬೆಳೆ ಹಂಗಾಮಿನಲ್ಲಿಯೂ ರಸಗೊಬ್ಬರ ಸರಬರಾಜಿನಲ್ಲಿ ಸ್ವಲ್ಪವೂ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಕೃಷಿ ಇಲಾಖೆ ಈಗಾಗಲೇ ಮುಂಗಾರು ಹಂಗಾಮಿಗೆ ಎಷ್ಟು ರಸಗೊಬ್ಬರ ಬೇಕು ಎಂಬ ಬಗ್ಗೆ ಬೇಡಿಕೆ ಸಲ್ಲಿಸಿದೆ. ಇದಕ್ಕೆ ಅನುಗುಣವಾಗಿ ಸರಬರಾಜು ಮಾಡಲು ತಯಾರಿ ಆರಂಭಿಸಲಾಗಿದೆ. ಸೋಮವಾರದ ಸಭೆಯಲ್ಲಿಯೂ ಈ ವಿಷಯ ಮತ್ತೊಮ್ಮೆ ಚರ್ಚೆಯಾಗಲಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024