ಮಂಡ್ಯ ಜಿಲ್ಲೆಯ ಧೃವತಾರೆ , ಕಾವೇರಿ ವರಪುತ್ರ, ಹೋರಾಟಗಾರ, ಗಾಂಧೀವಾದಿ ಜಿ. ಮಾದೇಗೌಡರು (93) ವಯೋಸಹಜ ಖಾಯಿಲೆಗಳಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.
ಮಂಡ್ಯದ ಬಂಧೀಗೌಡ ಬಡಾವಣೆ ನಿವಾಸಿಯಾಗಿದ್ದ ಮಾದೇಗೌಡರು, ಮದ್ದೂರು ತಾಲೂಕಿನ ಗುರುದೇವರ ಹಳ್ಳಿ ಗ್ರಾಮದವರು.
ಮಾದೇಗೌಡರು, ಪತ್ನಿ , ಡಾ. ಪ್ರಕಾಶ್, ಮಧು ಮಾದೇಗೌಡ ಸೇರಿದಂತೆ ನಾಲ್ವರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಗಳು ಅಭಿಮಾನಿಗಳನ್ನು ಅಗಲಿದ್ದಾರೆ.
೯ ದಶಕಗಳ ನಿರಂತರ ಹೋರಾಟ, ಅಭಿವೃದ್ಧಿ ಬಗ್ಗೆ ಸದಾ ಚಿಂತನೆ ಇಟ್ಟು ಬದುಕು ಸವೆಸಿದ ಗೌಡರು, ಬದುಕಿನಲ್ಲಿ ಗಾಂದೀವಾದವನ್ನು ಅಳವಡಿಸಿಕೊಂಡರು. ಮಂಡ್ಯದಲ್ಲಿ ಹಾಗೂ ಭಾರತೀನಗರದಲ್ಲಿ ಗಾಂಧೀಭವನ, ಗಾಂಧೀಗ್ರಾಮ, ಗುಡಿ ಕೈಗಾರಿಕೆ, ವಾಚನಾಲಯ ಹೀಗೆ ಹಲವು ಗಾಂಧೀ ಮಾರ್ಗ ಅನುಸರಿಸಿ , ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಕೀರ್ತಿ ಗೌಡರದು.
ಮದ್ದೂರು ತಾಲೂಕಿನ ಕಾಳಮುದ್ದನದೊಡ್ಡಿ ಗ್ರಾಮ ಎಂದರೆ ಗೌಡರಿಗೆ ಅಚ್ಚುಮೆಚ್ಚು. ಈ ಗ್ರಾಮಕ್ಕೆ ಪಟ್ಟಣದ ಸ್ವರೂಪ ತಂದು ಕೊಟ್ಟು , ಭಾರತೀನಗರ ಎಂದು ಹೊಸ ಹೆಸರನ್ನು ಖ್ಯಾತಿಗೊಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ