ಮಂಡ್ಯ ಜಿಲ್ಲೆಯ ಧೃವತಾರೆ , ಕಾವೇರಿ ವರಪುತ್ರ, ಹೋರಾಟಗಾರ, ಗಾಂಧೀವಾದಿ ಜಿ. ಮಾದೇಗೌಡರು (93) ವಯೋಸಹಜ ಖಾಯಿಲೆಗಳಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.
ಮಂಡ್ಯದ ಬಂಧೀಗೌಡ ಬಡಾವಣೆ ನಿವಾಸಿಯಾಗಿದ್ದ ಮಾದೇಗೌಡರು, ಮದ್ದೂರು ತಾಲೂಕಿನ ಗುರುದೇವರ ಹಳ್ಳಿ ಗ್ರಾಮದವರು.
ಮಾದೇಗೌಡರು, ಪತ್ನಿ , ಡಾ. ಪ್ರಕಾಶ್, ಮಧು ಮಾದೇಗೌಡ ಸೇರಿದಂತೆ ನಾಲ್ವರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಗಳು ಅಭಿಮಾನಿಗಳನ್ನು ಅಗಲಿದ್ದಾರೆ.
೯ ದಶಕಗಳ ನಿರಂತರ ಹೋರಾಟ, ಅಭಿವೃದ್ಧಿ ಬಗ್ಗೆ ಸದಾ ಚಿಂತನೆ ಇಟ್ಟು ಬದುಕು ಸವೆಸಿದ ಗೌಡರು, ಬದುಕಿನಲ್ಲಿ ಗಾಂದೀವಾದವನ್ನು ಅಳವಡಿಸಿಕೊಂಡರು. ಮಂಡ್ಯದಲ್ಲಿ ಹಾಗೂ ಭಾರತೀನಗರದಲ್ಲಿ ಗಾಂಧೀಭವನ, ಗಾಂಧೀಗ್ರಾಮ, ಗುಡಿ ಕೈಗಾರಿಕೆ, ವಾಚನಾಲಯ ಹೀಗೆ ಹಲವು ಗಾಂಧೀ ಮಾರ್ಗ ಅನುಸರಿಸಿ , ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಕೀರ್ತಿ ಗೌಡರದು.
ಮದ್ದೂರು ತಾಲೂಕಿನ ಕಾಳಮುದ್ದನದೊಡ್ಡಿ ಗ್ರಾಮ ಎಂದರೆ ಗೌಡರಿಗೆ ಅಚ್ಚುಮೆಚ್ಚು. ಈ ಗ್ರಾಮಕ್ಕೆ ಪಟ್ಟಣದ ಸ್ವರೂಪ ತಂದು ಕೊಟ್ಟು , ಭಾರತೀನಗರ ಎಂದು ಹೊಸ ಹೆಸರನ್ನು ಖ್ಯಾತಿಗೊಳಿಸಿದರು.
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
- ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
More Stories
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ