ಮಂಡ್ಯ ಜಿಲ್ಲೆಯ ಧೃವತಾರೆ , ಕಾವೇರಿ ವರಪುತ್ರ, ಹೋರಾಟಗಾರ, ಗಾಂಧೀವಾದಿ ಜಿ. ಮಾದೇಗೌಡರು (93) ವಯೋಸಹಜ ಖಾಯಿಲೆಗಳಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.
ಮಂಡ್ಯದ ಬಂಧೀಗೌಡ ಬಡಾವಣೆ ನಿವಾಸಿಯಾಗಿದ್ದ ಮಾದೇಗೌಡರು, ಮದ್ದೂರು ತಾಲೂಕಿನ ಗುರುದೇವರ ಹಳ್ಳಿ ಗ್ರಾಮದವರು.
ಮಾದೇಗೌಡರು, ಪತ್ನಿ , ಡಾ. ಪ್ರಕಾಶ್, ಮಧು ಮಾದೇಗೌಡ ಸೇರಿದಂತೆ ನಾಲ್ವರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಗಳು ಅಭಿಮಾನಿಗಳನ್ನು ಅಗಲಿದ್ದಾರೆ.
೯ ದಶಕಗಳ ನಿರಂತರ ಹೋರಾಟ, ಅಭಿವೃದ್ಧಿ ಬಗ್ಗೆ ಸದಾ ಚಿಂತನೆ ಇಟ್ಟು ಬದುಕು ಸವೆಸಿದ ಗೌಡರು, ಬದುಕಿನಲ್ಲಿ ಗಾಂದೀವಾದವನ್ನು ಅಳವಡಿಸಿಕೊಂಡರು. ಮಂಡ್ಯದಲ್ಲಿ ಹಾಗೂ ಭಾರತೀನಗರದಲ್ಲಿ ಗಾಂಧೀಭವನ, ಗಾಂಧೀಗ್ರಾಮ, ಗುಡಿ ಕೈಗಾರಿಕೆ, ವಾಚನಾಲಯ ಹೀಗೆ ಹಲವು ಗಾಂಧೀ ಮಾರ್ಗ ಅನುಸರಿಸಿ , ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಕೀರ್ತಿ ಗೌಡರದು.
ಮದ್ದೂರು ತಾಲೂಕಿನ ಕಾಳಮುದ್ದನದೊಡ್ಡಿ ಗ್ರಾಮ ಎಂದರೆ ಗೌಡರಿಗೆ ಅಚ್ಚುಮೆಚ್ಚು. ಈ ಗ್ರಾಮಕ್ಕೆ ಪಟ್ಟಣದ ಸ್ವರೂಪ ತಂದು ಕೊಟ್ಟು , ಭಾರತೀನಗರ ಎಂದು ಹೊಸ ಹೆಸರನ್ನು ಖ್ಯಾತಿಗೊಳಿಸಿದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment