ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
186 ದ್ವಿತೀಯ ದರ್ಜೆ, ಅಸಿಸ್ಟೆಂಟ್, ಫೀಲ್ಡ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದೆ . ಆಸಕ್ತರು ಅರ್ಜಿ ಸಲ್ಲಿಸಬಹುದು.
ಜುಲೈ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಜೂನ್ 23ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹುದ್ದೆ ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್, ಫೀಲ್ಡ್ ಇನ್ಸ್ಪೆಕ್ಟರ್.
- ಒಟ್ಟು ಹುದ್ದೆ 186
- ವೇತನ ಮಾಸಿಕ ₹ 37,900-70,850
- ಉದ್ಯೋಗದ ಸ್ಥಳ ಕರ್ನಾಟಕ
- ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 22, 2023
ಹುದ್ದೆಯ ಮಾಹಿತಿ:
- ವೆಲ್ಫೇರ್ ಆಫೀಸರ್- 12
- ಫೀಲ್ಡ್ ಇನ್ಸ್ಪೆಕ್ಟರ್- 60
- ಫಸ್ಟ್ ಡಿವಿಶನ್ ಅಸಿಸ್ಟೆಂಟ್ (FDA)- 12
- ಪ್ರೈವೇಟ್ ಕನ್ಸಲ್ಟೆಂಟ್- 2
- ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್ (SDA)- 10
ವೇತನ:
- ವೆಲ್ಫೇರ್ ಆಫೀಸರ್- ಮಾಸಿಕ ₹ 37,900-70,850
- ಫೀಲ್ಡ್ ಇನ್ಸ್ಪೆಕ್ಟರ್- ಮಾಸಿಕ ₹ 33,450-62,600
- ಫಸ್ಟ್ ಡಿವಿಶನ್ ಅಸಿಸ್ಟೆಂಟ್ (FDA)- ಮಾಸಿಕ ₹ 27,650-52,650
- ಪ್ರೈವೇಟ್ ಕನ್ಸಲ್ಟೆಂಟ್- ಮಾಸಿಕ ₹ 27,650-52,650
- ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್ (SDA)- ಮಾಸಿಕ ₹ 21,400-42,000
ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ ಇತ್ಯಾದಿ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.ವಿಎಯಿಂದಲೇ 40 ಸಾವಿರ ರು ಲಂಚ ಸ್ವೀಕಾರ : ಪಾಂಡವಪುರ ತಹಶೀಲ್ದಾರ್ ಲೋಕಾ ಬಲೆಗೆ
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 22, 2023
- ಆನ್ಲೈನ್ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಜುಲೈ 25, 2023
- ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕ ಕಟ್ಟಲು ಕೊನೆಯ ದಿನ: ಜುಲೈ 26, 2023
- ಬರ ನಿರ್ವಹಣೆ : 31 ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ: ಕೃಷಿ ಸಚಿವರು
- ಅನ್ನಭಾಗ್ಯ : ಹಣ ಮನೆಯ 2ನೇ ಯಜಮಾನರ ಖಾತೆಗೆ
- ರಾಜ್ಯದ 63 ಕಡೆ ಲೋಕಾ ದಾಳಿ – ಭ್ರಷ್ಟರನ್ನು ಜಾಲಾಡುತ್ತಿರುವ ಅಧಿಕಾರಿಗಳು
- 2024ರ ಜ. 23 ರಂದು 545 ಪಿಎಸ್ಐ ಹುದ್ದೆಗೆ ಮರು ಪರೀಕ್ಷೆ- ಗೃಹ ಸಚಿವ
- ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ?; ಸುಪಾರಿ ಕೊಲೆ ಶಂಕೆ
- ಮದಗಜದೊಂದಿಗೆ ಕಾಳಗ : ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವು