ಚಲನಚಿತ್ರ ಸಮಾಜದ ಮೇಲೆ ಪ್ರಭಾವ ಬೀರುವ ಪರಿಣಾಮಕಾರಿ ಮಾಧ್ಯಮ ಎಂದು ಆಪ್ತ ಸಮಾಲೋಚಕ ನಡಹಳ್ಳಿ ವಸಂತ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ಹೊರ ವಲಯದ ಸುಬ್ಬಯ್ಯ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಸುಬ್ಬಯ್ಯ ಲಿಟರರಿ ಕ್ಲಬ್ ಮತ್ತು ಮನೋವೈದ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಏರ್ಪಡಿಸಿದ್ದ ಚಲನಚಿತ್ರ ವಿಮರ್ಶೆ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಒತ್ತಡಗಳು ಇರುವುದು ಇಂದು ಸಾಮಾನ್ಯ ಸಂಗತಿ. ಇದನ್ನು ಹೇಳಿಕೊಳ್ಳಲು ಕೀಳರಿಮೆ ಇರುತ್ತದೆ. ಇಂಥ ಕೀಳರಿಮೆ ತೊಡೆದುಹಾಕಿ ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಶಿಕಾರಿಪುರ ಸರ್ಕಾರಿ ಆಸ್ಪತ್ರೆಯ ಮನೋವೈದ್ಯ ಡಾ. ಎಚ್.ಸಿ. ಸಂಜಯ್ ಮಾತನಾಡಿ, ಭಾವನಾತ್ಮಕ ಏರಿಳಿತಗಳು ದೇಹದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯಕ್ಕೂ ಒತ್ತು ನೀಡಬೇಕೆಂದರು.
ಮನಶಾಸ್ತ್ರಜ್ಞ ವಿಭಾಗದ ಮುಖ್ಯಸ್ಥ ಡಾ. ಹರೀಶ್ ದೇಲಾಂತ ಬೆಟ್ಟು, ಡೀನ್ ಡಾ. ಎಸ್.ಎಂ. ಕಟ್ಟಿ, ಉಪ ಪ್ರಾಂಶುಪಾಲ ಡಾ. ಬಿ.ಎಂ.ಸಿದ್ದಲಿಂಗಪ್ಪ, ಶೈಕ್ಷಣಿಕ ನಿರ್ದೇಶಕ ಡಾ. ಆರ್. ಕೆ. ಪೈ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಬಹುಮಾನ ವಿತರಿಸಲಾಯಿತು. ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಡಾ. ವಿನಯಾ ಶ್ರೀನಿವಾಸ್ ಸ್ವಾಗತಿಸಿದರು. ಮನೋರೋಗ ತಜ್ಞೆ ಡಾ. ಕೆ.ಎಸ್. ಶುಭ್ರತಾ ನಿರೂಪಿಸಿದರು. ಯು.ಜಿ. ನಿರಂಜನಮೂರ್ತಿ ವಂದಿಸಿದರು.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment