ಮಂಡ್ಯದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ FIR

Team Newsnap
1 Min Read
Sri Ram Deva Betta Project can't be stopped: Minister Ashwath Narayan ಶ್ರೀರಾಮ ದೇವರ ಬೆಟ್ಟ ಯೋಜನೆ ತಡೆಯಲು ಸಾಧ್ಯವಿಲ್ಲ: ಸಚಿವ ಅಶ್ವತ್ಥ್‌ ನಾರಾಯಣ್

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ವಿರುದ್ಧ ಮಂಡ್ಯದಲ್ಲಿ FIR ದಾಖಲು ಮಾಡಲಾಗಿದೆ.

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಮೇ 16ರಂದು ಮಂಡ್ಯದ ಹಲವು ಕಾಲೇಜುಗಳಲ್ಲಿ ಸಚಿವರು ಸಭೆ ನಡೆಸಿದ್ದರು.ಈ ಮೂಲಕ ಸಚಿವರೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ದೂರು ನೀಡಿದ್ದರು.

ಇದನ್ನು ಓದಿರಾಜ್ಯದ ಮೂವರಿಗೆ ಐಎಎಸ್ ಹುದ್ದೆಗೆ ಸುಪ್ರೀಂ ಅಸ್ತು

ಈ ಹಿನ್ನೆಲೆಯಲ್ಲಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ವಿ.ರವಿಶಂಕರ್ ವಿರುದ್ಧ ಐಪಿಸಿ ಸೆಕ್ಷನ್ 1860 ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ 1950, 1951 ಅಡಿ ಪ್ರಕರಣ ದಾಖಲಾಗಿದೆ.

Share This Article
Leave a comment