February 21, 2026

Newsnap Kannada

The World at your finger tips!

dvg

ಶಾಮನೂರು ಶಿವಶಂಕರಪ್ಪ ಡಿಸ್ಟಿಲರಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಓರ್ವ ಸಾವು – ಇಬ್ಬರಿಗೆ ಗಾಯ

Spread the love

ದಾವಣಗೆರೆ ಶಾಮನೂರು ಶಿವಶಂಕರಪ್ಪ ಮಾಲೀಕತ್ವದ ಡಿಸ್ಟಿಲರಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಈ ಘಟನೆಯಲ್ಲಿ ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ರಘು(38) ಎಂಬಾತ ಸಾವನ್ನಪ್ಪಿದರು.

ಡಿಸ್ಟಿಲರಿ ಕರ್ಖಾನೆಯಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತು, ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ ಕೂಡಲೇ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.

ಆದರೆ ಡಿಸ್ಟಿಲರಿ ಫ್ಯಾಕ್ಟರಿ ಆದ ಕಾರಣ ಬೆಂಕಿ ಹತೋಟಿಗೆ ಬರುತ್ತಿಲ್ಲ. ಬೆಂಕಿಯ ಶಾಖ ಹೆಚ್ಚಾಗಿದೆ. ಸ್ಥಳೀಯರು ಕಾರ್ಖಾನೆಯಿಂದ 500 ಮೀಟರ್​ ದೂರ ಸರಿದಿದ್ದಾರೆ.

ಅವಘಡದಲ್ಲಿ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಆಸ್ಪತ್ರೆಗೆ ಸಾಗಿಸುವ ವೇಳೆ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ಹರಿಹರ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

error: Content is protected !!