ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ನಡೆದಿದೆ, ಶಾರ್ಟ್ ಸರ್ಕ್ಯೂಟ್ನಿಂದ ಕಳೆದ ರಾತ್ರಿ 2.30 ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಗಳೂರಿನ ವಿವೇಕನಗರದ ಹೊನ್ನಾರ್ ಪೇಟ್ನಲ್ಲಿರುವ ಗ್ಯಾರೇಜ್ನಲ್ಲಿ ಈ ಅವಘಡ ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಕಾರು ಗ್ಯಾರೇಜ್ ಸಂಪೂರ್ಣ ಭಸ್ಮವಾಗಿದೆ. ಗ್ಯಾರೇಜ್ನಲ್ಲಿರುವ 3 ಬೈಕ್, 4 ಕಾರು ಬೆಂಕಿಗಾಹುತಿಯಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನಾಸೀರ್ ಎಂಬುವವರ ಮಾಲೀಕತ್ವದ ಗ್ಯಾರೇಜ್ ಇದಾಗಿತ್ತು. ಬೆಂಕಿ ಹೊತ್ತಿಕೊಂಡ ಪರಿಣಾಮ ಗ್ಯಾರೇಜ್ನಲ್ಲಿದ್ದ 2 ಸಿಲಿಂಡರ್ ಕೂಡ ಸ್ಫೋಟಗೊಂಡಿದೆ.
ಸ್ಫೋಟದ ಭೀಕರತೆಗೆ ನಗರದ ಜನ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿನಂದಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ