March 10, 2026

Newsnap Kannada

The World at your finger tips!

fire accident

ಬೆಂಗಳೂರು ನಗರದಲ್ಲಿ ಭೀಕರ ಬೆಂಕಿ ಅನಾಹುತ: 100ಕ್ಕೂ ಹೆಚ್ಚು ವಾಹನಗಳು ಭಸ್ಮ

Spread the love

ಬೆಂಗಳೂರು: ನಗರದ ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆಯ ಮೈದಾನದಲ್ಲಿ ಭೀಕರ ಬೆಂಕಿ ಅನಾಹುತ ಸಂಭವಿಸಿದ್ದು, 100ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿವೆ.

ಈ ಮೈದಾನದಲ್ಲಿ ಪೊಲೀಸರು ಜಪ್ತಿ ಮಾಡಿದ್ದ ವಾಹನಗಳನ್ನು ಪಾರ್ಕ್ ಮಾಡಿದ್ದರು. ಆದರೆ, ಮೈದಾನದಲ್ಲಿ ಹುಲ್ಲು ಗಿಡಗಳು ಬೆಳೆದುಕೊಂಡಿದ್ದರಿಂದ ಬೆಂಕಿ ವೇಗವಾಗಿ ಹರಡಿದ್ದು, ಐದು ಕಾರುಗಳು, ಐದು ಆಟೋಗಳು ಹಾಗೂ 80ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಘಟನೆಯ ಮೂಲ ಕಾರಣ , ಯಾರೋ ಸಿಗರೇಟು ಹೊತ್ತಿಸಿ ಕಡ್ಡಿ ಎಸೆದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಹೆಚ್ಚಿನ ಹಾನಿ ತಡೆಯಲು ಕ್ರಮ ಕೈಗೊಂಡಿದೆ.ಇದನ್ನು ಓದಿ –ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ, ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ಸ್ಥಳೀಯರು ಹಾಗೂ ಪೊಲೀಸರು ಸ್ಥಳದಲ್ಲಿ ಪರಸ್ಪರ ಸಹಕಾರ ನೀಡಿದ್ದು, ಈ ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

error: Content is protected !!