February 21, 2026

Newsnap Kannada

The World at your finger tips!

arun tivari

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ :19ನೇ ಅಂತಸ್ತಿನಿಂದ ಜಂಪ್ ಮಾಡಿದ ವ್ಯಕ್ತಿ ಸಾವು

Spread the love

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತದಿಂದ ತಪ್ಪಿಸಿಕೊಳ್ಳಲು ಹೋಗಿ 19 ನೇ ಮಹಡಿಯಿಂದ ಜಂಪ್ ಮಾಡಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮುಂಬೈನ ಅವಿಘ್ನ ಪಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ನಿರ್ಮಾಣ ಹಂತದಲ್ಲಿದ್ದ 60 ಮಹಡಿಯ ಕಟ್ಟಡದ ಅಪಾರ್ಟ್‌ಮೆಂಟ್‌ನ 19ನೇ ಅಂತಸ್ತಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ, ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡ ಬಾಲ್ಕನಿಯಿಂದ ಜಿಗಿದ ವ್ಯಕ್ತಿ ಸಾವನ್ನಪ್ಪಿದ್ದಾರೆ, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಅರುಣ್​ ತಿವಾರಿ (30)ಎಂದು ಗುರುತಿಸಲಾಗಿದೆ, ಸ್ಥಳಕ್ಕೆ ಮುಂಬೈ ಮೇಯರ್ ಕಿಶೋರಿ ಪೆಡ್ನೆಕಾ ಹಾಗೂ ಇತರೇ ಅಧಿಕಾರಿಗಳು ಭೇಟಿ ನೀಡಿದ್ದಾರೆ.

error: Content is protected !!