January 30, 2026

Newsnap Kannada

The World at your finger tips!

car b

ಹಲಗೂರು ಬಳಿ ಆಯತಪ್ಪಿ ಹಳ್ಳಕ್ಕೆ ಬಿದ್ದ ಕಾರಿಗೆ ಬೆಂಕಿ – ಮೂವರು ಸಜೀವ ದಹನ : ಇಬ್ಬರಿಗೆ ಗಾಯ

Spread the love

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಪಲ್ಟಿಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಕಾರಿನಲ್ಲೇ ಸಜೀವ ದಹನಗೊಂಡ ಧಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ಹಲಗೂರಿನ ಬಳಿ ಶುಕ್ರವಾರ ಬೆಳಗಿನ ಜಾವ ಸಂಭವಿದೆ.

ಹಲಗೂರು ಬಳಿ ಕನಕಪುರ- ಮಳವಳ್ಳಿ ರಸ್ತೆಯಲ್ಲಿ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿದ್ದ ಶೇಖ್ ಫೈಸಲ್ (44) ಮೆಹಕ್ (33) ಶೇಖ್ ಆಯಿಲ್ (11) ಕಾರಿನಲ್ಲೇ ದಹನಗೊಂಡವರು. ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಾಮರಾಜನಗರ ಜಿಲ್ಲೆ ಹನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಕಾರು ಹಲಗೂರು ಬಳಿ ಅಯತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ.

ಕಾರಿನಿಂದ ಹೊರ ಬರಲಾಗದೆ ಮೂವರು ಕಾರಿನಲ್ಲೆ ಸಜೀವ ದಹನವಾದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ‌.

error: Content is protected !!