ಬೆಂಗಳೂರಿನಲ್ಲಿ ಕೋವಿಡ್ ಕಡಿಮೆ ಆಗಲಿ ಅಥವಾ ಜಾಸ್ತಿ ಆಗಲಿ ಫೆಬ್ರವರಿ ಆರಂಭದಿಂದಲೇ ಬೆಂಗಳೂರಿನಲ್ಲಿ ಶಾಲೆ ಆರಂಭವಾಗುತ್ತವೆ.
ಈ ವಿಷಯವನ್ನು ಮಡಿಕೇರಿ ಮೂನಾ೯ಡಿನಲ್ಲಿ ಸುದ್ದಿಗಾರರಿಗೆ ಸೂಚ್ಯವಾಗಿ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕಳೆದ ವಾರದ ಕೋವಿಡ್ ಸಂಬಂಧ ಸಭೆ ನಡೆಸುವ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶಾಲೆ ಆರಂಭಿಸುವ ಬಗ್ಗೆ ಚರ್ಚಿಸಲಾಗಿತ್ತು. ಇದೇ 29 ರಂದು ನಡೆಯುವ ಸಭೆಯಲ್ಲಿ ಶಾಲೆಗಳ ಅರಂಭ ಮಾಡುವ ಬಗ್ಗೆ ನಿರ್ಧಾರ ಮಾಡುವುದಾಗಿ ತಿಳಿಸಿದರು.
ಈಗಾಗಲೇ ಬೆಂಗಳೂರಿನಲ್ಲಿ ಪ್ರತಿದಿನ ಕೋವಿಡ್ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಶಾಲೆಗಳನ್ನು ಓಪನ್ ಮಾಡುವ ಸಾಧ್ಯತೆಗಳು ಜಾಸ್ತಿ ಇದೆ ಎಂದರು.
ಈಗಾಗಲೇ ತಜ್ಞರು ಮೂರನೇ ಅಲೆಯಲ್ಲಿ ಹೇಳಿದಂತೆ ರಾಜ್ಯದಲ್ಲಿ ಒಟ್ಟು 77ಸಾವಿರ ಶಾಲೆಯನ್ನು ಪ್ರಾರಂಭಿಸಿದ್ದೇವೆ. ಐದು ಜಿಲ್ಲೆಗಳಲ್ಲಿ ಶಾಲೆಗಳನ್ನೇ ಬಂದ್ ಮಾಡಿಲ್ಲ. 19 ಜಿಲ್ಲೆಗಳಲ್ಲಿ 246 ಶಾಲೆಗಳನ್ನು ಬಂದ್ ಮಾಡಲಾಗಿತ್ತು. ಅದು ಕೂಡ 3ರಿಂದ 7 ದಿನ ಬಂದ್ ಮಾಡಿದ್ದೆವು. ಪೂರ್ಣವಾಗಿ ಬಂದ್ ಮಾಡಿದ್ದು ಅಂದರೆ ಧಾರವಾಡ, ಹುಬ್ಬಳ್ಳಿ, ಮೈಸೂರು, ಮಂಡ್ಯ, ಹಾಗೂ ಬೆಂಗಳೂರಿನ ಮಹಾನಗರಗಳಲ್ಲಿ ಮಾತ್ರ ಎಂದು ಹೇಳಿದರು.
ಹತ್ತನೇ ತರಗತಿಯ ಪರೀಕ್ಷೆ ದಿನಾಂಕವನ್ನು ನಿಗದಿ ಮಾಡಲಾಗಿದೆ. ಇದೇ ರೀತಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತದೆ. ಮಾಚ್೯ 28 ರಿಂದ ಎಸ್ಎಸ್ ಎಲ್ಸಿ ಪರೀಕ್ಷೆ ದಿನಾಂಕವನ್ನು ಘೋಷಿಸಲಾಗಿದೆ. ಕೋವಿಡ್ ನಿಯಮ ಪಾಲಿಸಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಬಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ