ಸುಮಾರು 40 ಲಕ್ಷ ರೂ. ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬೆಂಗಳೂರು ಜಲಮಂಡಳಿಯ (ಬಿಡ್ಲೂಎಸ್’ಎಸ್’ಬಿ) ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಮಡಾಳ್ ಅವರನ್ನು ನ್ಯಾಯಾಲಯ 14 ದಿನ ನ್ಯಾಯಾಂಗಕ್ಕೆ ಒಪ್ಪಿಸಿದೆ.
ಬಂಧಿತ ಪ್ರಶಾಂತ್ ಮಾಡಾಳ್ ಹಾಗೂ ಅವರ ಸಂಬಂಧಿ ಸಿದ್ದೇಶ್, ಸುರೇಂದ್ರ (ಅಕೌಂಟೆಂಟ್), ನಿಕೋಲಸ್, ಗಂಗಾಧರ್ (ದುಡ್ಡು ಕೊಡಲು ಬಂದವರು)ಸೇರಿ ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಗರದ ಲೋಕಾಯುಕ್ತ ಕೋರ್ಟ್ ಆದೇಶ ಹೊರಡಿಸಿದೆ.
ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ ನಿನ್ನೆ ರಾತ್ರಿ 40 ಲಕ್ಷ ರೂ ನಗದು ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪ್ರಶಾಂತ್’ರನ್ನು ಬಂಧಿಸಿದ್ದರು.
ಇಂದು ಬೆಳಿಗ್ಗೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು.
ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇನ್ನೂ ದಾಳಿ ಬಾಕಿ ಇರುವ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖಾ ಹಂತ ಪೂರ್ಣಗೊಂಡ ನಂತರ ಲೋಕಾಯುಕ್ತ ಅಧಿಕಾರಿಗಳು ತಮ್ಮ ವಶಕ್ಕೆ ಕೇಳುವ ಸಾಧ್ಯತೆಗಳಿವೆ.ಮಾ.12 ಕ್ಕೆ ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆ – ಪ್ರಹ್ಲಾದ್ ಜೋಶಿ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು