ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ : ಕರ್ತವ್ಯ ಲೋಪ – ಪಿಎಸ್‌ಐ ಸೇರಿ ಐವರು ಸಿಬ್ಬಂದಿ ಅಮಾನತು

Team Newsnap
1 Min Read

ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ಪ್ರಕರಣ ಸಂಬಂಧ ಕರ್ತವ್ಯ ಲೋಪ ಆರೋಪದ ಹಿನ್ನೆಲೆ ಪಿಎಸ್‌ಐ ಸೇರಿ ಐವರು ಸಿಬ್ಬಂದಿಗಳನ್ನುಅಮಾನತು ಮಾಡಲಾಗಿದೆ.

ಇದನ್ನು ಓದಿ –ಸರಳ ವಾಸ್ತು ಗುರೂಜಿ ಹತ್ಯೆಗೆ ಅಣ್ಣನ ಮಕ್ಕಳ ಎಂಟ್ರಿಯೂ ಕಾರಣ : ವಾಟ್ಸಾಪ್ ಸಂದೇಶದಿಂದ ಬಹಿರಂಗ

ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ವೇಳೆ ಸಿಬ್ಬಂದಿಗಳು ಸರಿಯಾದ ತನಿಖೆ ನಡೆಸದಿರುವ ಬಗ್ಗೆ ಆರೋಪ ಕೇಳಿಬಂದಿತ್ತು, ಈ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಈ ನಡುವೆ ಇಬ್ಬರು ಪಿಎಸ್‌ಐ, ಮೂವರು ಕಾನ್ಸ್ ಟೇಬಲ್ ಸಹಿತ ಐವರನ್ನು ಅಮಾನತುಗೊಳಿಸಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ.

Share This Article
Leave a comment