February 18, 2026

Newsnap Kannada

The World at your finger tips!

WhatsApp Image 2024 09 02 at 11.44.24 AM

ತೆಲಂಗಾಣ , ಆಂಧ್ರದಲ್ಲಿ ಪ್ರವಾಹ – 27ಕ್ಕೆ ಏರಿಕೆ ಸಾವಿನ ಸಂಖ್ಯೆ

Spread the love

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು , ಪ್ರವಾಹದಿಂದ ಎರಡು ರಾಜ್ಯಗಳಿಂದ ಸೇರಿ 27 ಜನ ಸಾವಿಗೀಡಾಗಿದ್ದಾರೆ.

ಸತ್ತವರ ಪೈಕಿ 12 ಮಂದಿ ಆಂಧ್ರಪ್ರದೇಶದವರಾಗಿದ್ದು, 15 ಮಂದಿ ತೆಲಂಗಾಣದವರಾಗಿದ್ದಾರೆ.ಮಳೆಯ ಅಬ್ಬರಕ್ಕೆ ರಸ್ತೆಗಳು ಜಲಾವೃತಗೊಂಡಿದ್ದು ಕೆಲವೆಡೆ ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ.

97 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು,ಅಲ್ಲದೇ 140 ರೈಲುಗಳು ರದ್ದುಪಡಿಸಲಾಗಿದೆ.

ರೈಲ್ವೆ ನಿಲ್ದಾಣಗಳಲ್ಲಿ 6,000 ಪ್ರಯಾಣಿಕರು ಸಿಲುಕಿಕೊಂಡಿದ್ದು ,ಹಲವೆಡೆ ರಕ್ಷಣಾ ಕಾರ್ಯಾಚರಣೆಗಳಿಗೂ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆಯಿಂದಾಗಿ ವಿಜಯವಾಡ ಬುಡಮೇರು ವಾಗು ನದಿ ಸೇರಿದಂತೆ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಈ ನದಿ ಸಮೀಪದ ಪ್ರದೇಶಗಳ ಸುಮಾರು 17,000ಕ್ಕೂ ಹೆಚ್ಚು ಜನರನ್ನು ರಕ್ಷಣಾ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನೂ ತೀವ್ರ ಪ್ರವಾಹವನ್ನು ಅನುಭವಿಸಿದ ವಿಜಯವಾಡ ಒಂದರಲ್ಲೇ 2.76 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ.ಮುಡಾ ಹಗರಣ : ಸಿಎಂ ವಿರುದ್ಧ ದೂರು ನೀಡಿದ್ದ RTI ಕಾರ್ಯಕರ್ತನಿಗೆ ಜೀವ ಬೆದರಿಕೆ

ಸೆ.2 ರಿಂದ 5 ರವರೆಗೆ ನಾಲ್ಕು ದಿನಗಳ ಕಾಲ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.

error: Content is protected !!