ರಾಮನಗರದ ಡಾ.ಎಚ್.ಎಲ್. ನಾಗೇಗೌಡ ಕಲಾ ಶಾಲೆಯ ವಿದ್ಯಾರ್ಥಿಗಳು ಇಲ್ಲಿನ ಜಾನಪದ ಲೋಕದಲ್ಲಿ ಭಾನುವಾರ ಪಟ ಕುಣಿತ ಪ್ರದರ್ಶಿಸಿದರು.
ಜನಪದ ಕಲೆಗಳನ್ನು ಕಲಿಯಲು ಯುವ ಸಮುದಾಯ ಆಸಕ್ತಿ ತೋರುತ್ತಿದೆ. ಓದಿನ ಜೊತೆಗೆ ಜನಪದ ಕಲೆಗಳನ್ನು ಕಲಿತು ಕೊಂಡರೆ ನಾಡಿನ ಸಂಸ್ಕøತಿಯನ್ನು ಉಳಿಸಬಹುದು. ಕಲೆಗಳ ಪ್ರದರ್ಶನದ ಮೂಲಕವೆ ಉತ್ತಮವಾದ ಜೀವನ ರೂಪಿಸಿಕೊಳ್ಳಬಹುದು ಎಂದು ರಂಗ ನಿರ್ದೇಶಕ ಎಸ್. ಪ್ರದೀಪ್ ತಿಳಿಸಿದರು.
ಹಿರಿಯ ತಮಟೆ ಕಲಾವಿದ ಗೋವಿಂದಯ್ಯ ಬೊಮ್ಮಚ್ಚನಹಳ್ಳಿ ಮಾತನಾಡಿ ಜನಪದ ಕಲೆಗಳ ಪ್ರದರ್ಶನಕ್ಕೆ ಉತ್ತಮವಾದ ಬೇಡಿಕೆ ಇದೆ. ಜನಪದ ಕಲೆಗಳನ್ನು ಕಲಿಯುವ ಕಲಾವಿದರು ಶಿಸ್ತು, ಶ್ರದ್ಧೆ, ಸಮಯ ಪಾಲನೆ ಮಾಡುವುದರೊಂದಿಗೆ ದುರಾಭ್ಯಾಸಗಳಿಂದ ದೂರವಿದ್ದರೆ ಉತ್ತಮ ಕಲಾವಿದರಾಗಬಹುದು ಎಂದು ತಿಳಿಸಿದರು.
ಕಲಾವಿದರಾದ ಸುನೀತ, ಬಿಂದು, ಭೂಮಿಕಾ, ಹನ್ಸಿಕಾ, ಗೋವರ್ಧಿನಿ, ಹನ್ಸಿಕಾ, ಕವನಾ, ಪಲ್ಲವಿ, ಹಿರಿಯ ಕಲಾವಿದರಾದ ಲೋಕೇಶ್, ಗಂಗಾಧರ್, ಪ್ರಕಾಶ್ ಪ್ರದರ್ಶನ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು