Trending

ಜನಪದ ಲೋಕದಲ್ಲಿ ಕಲಾ ಶಾಲಾ ವಿದ್ಯಾರ್ಥಿಗಳಿಂದ ಪಟ ಕುಣಿತ

ರಾಮನಗರದ ಡಾ.ಎಚ್.ಎಲ್. ನಾಗೇಗೌಡ ಕಲಾ ಶಾಲೆಯ ವಿದ್ಯಾರ್ಥಿಗಳು ಇಲ್ಲಿನ ಜಾನಪದ ಲೋಕದಲ್ಲಿ ಭಾನುವಾರ ಪಟ ಕುಣಿತ ಪ್ರದರ್ಶಿಸಿದರು.

ಜನಪದ ಕಲೆಗಳನ್ನು ಕಲಿಯಲು ಯುವ ಸಮುದಾಯ ಆಸಕ್ತಿ ತೋರುತ್ತಿದೆ. ಓದಿನ ಜೊತೆಗೆ ಜನಪದ ಕಲೆಗಳನ್ನು ಕಲಿತು ಕೊಂಡರೆ ನಾಡಿನ ಸಂಸ್ಕøತಿಯನ್ನು ಉಳಿಸಬಹುದು. ಕಲೆಗಳ ಪ್ರದರ್ಶನದ ಮೂಲಕವೆ ಉತ್ತಮವಾದ ಜೀವನ ರೂಪಿಸಿಕೊಳ್ಳಬಹುದು ಎಂದು ರಂಗ ನಿರ್ದೇಶಕ ಎಸ್. ಪ್ರದೀಪ್ ತಿಳಿಸಿದರು.

ಹಿರಿಯ ತಮಟೆ ಕಲಾವಿದ ಗೋವಿಂದಯ್ಯ ಬೊಮ್ಮಚ್ಚನಹಳ್ಳಿ ಮಾತನಾಡಿ ಜನಪದ ಕಲೆಗಳ ಪ್ರದರ್ಶನಕ್ಕೆ ಉತ್ತಮವಾದ ಬೇಡಿಕೆ ಇದೆ. ಜನಪದ ಕಲೆಗಳನ್ನು ಕಲಿಯುವ ಕಲಾವಿದರು ಶಿಸ್ತು, ಶ್ರದ್ಧೆ, ಸಮಯ ಪಾಲನೆ ಮಾಡುವುದರೊಂದಿಗೆ ದುರಾಭ್ಯಾಸಗಳಿಂದ ದೂರವಿದ್ದರೆ ಉತ್ತಮ ಕಲಾವಿದರಾಗಬಹುದು ಎಂದು ತಿಳಿಸಿದರು.

ಕಲಾವಿದರಾದ ಸುನೀತ, ಬಿಂದು, ಭೂಮಿಕಾ, ಹನ್ಸಿಕಾ, ಗೋವರ್ಧಿನಿ, ಹನ್ಸಿಕಾ, ಕವನಾ, ಪಲ್ಲವಿ, ಹಿರಿಯ ಕಲಾವಿದರಾದ ಲೋಕೇಶ್, ಗಂಗಾಧರ್, ಪ್ರಕಾಶ್ ಪ್ರದರ್ಶನ ನೀಡಿದರು.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024