ಏಪ್ರಿಲ್ 9 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಕ್ಕೆ ಕೊರೊನಾ ಕರಿ ನೆರಳು ಬಿದ್ದಿದೆ.
ಚೆನ್ನೈಸೂಪರ್ ಕಿಂಗ್ಸ್, ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಿಗೂ ಕೊರೊನಾ ವಕ್ಕರಿಸಿದೆ.
ಆರ್ಸಿಬಿ ತಂಡದ ಓಪನಿಂಗ್ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್ಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಐಪಿಎಲ್ನ ಮೂರನೇ ಆಟಗಾರನಿಗೆ ಪಾಸಿಟಿವ್ ಬಂದಂತಾಗಿದೆ. ಪಡಿಕ್ಕಲ್ರ ಸಂಪರ್ಕ ಹೊಂದಿದ್ದ ಆಟಗಾರರು ಮತ್ತು ಸಿಬ್ಬಂದಿಯನ್ನು ಕ್ವಾರಂಟೀನ್ಗೆ ಒಳಪಡಿಸಲಾಗಿದೆ.
ಪಡಿಕ್ಕಲ್ಗೆ ಕೋವಿಡ್-19 ಬಂದಿರುವ ಕಾರಣ, ವಿರಾಟ್ ಕೊಹ್ಲಿ ಪಡೆಗೆ ಆಘಾತ ಎದುರಾಗಿದೆ. ಪಡಿಕ್ಕಲ್ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಕ್ವಾರಂಟೀನ್ಗೆ ಒಳಪಡಲಿದ್ದು, ಆರಂಭದ ಕೆಲ ಪಂದ್ಯಗಳಿಗೆ ಅವರು ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ.
ಏ.9ರಂದು ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಆರ್ಸಿಬಿ ಎದುರಿಸಲಿದೆ. ಏಪ್ರಿಲ್ 3 (ನಿನ್ನೆ) ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಲ್ರೌಂಡರ್ ಅಕ್ಷರ್ ಪಟೇಲ್, ಕೆಕೆಆರ್ನ ನಿತಿಶ್ ರಾಣಾ ಮತ್ತು ವಾಂಖೆಡೆ ಸ್ಟೇಡಿಯಂನ 10 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇತ್ತ ಸಿಎಸ್ಕೆ ಕ್ಯಾಂಪ್ನಲ್ಲೂ ಸಿಬ್ಬಂದಿಗೆ ಮಹಾಮಾರಿ ವಕ್ಕರಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ